Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...