Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...