Homeಮುಖಪುಟಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ, ಧರ್ಮಸೂಚಕ ಚಿತ್ರಗಳನ್ನು ಮುದ್ರಿಸುತ್ತಿದ್ದ ಜನರು ಈಗ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದವರ ಚಿತ್ರಗಳಿಗೆ ಬೇಡಿಕೆಯಿಡುತ್ತಿದ್ದಾರೆ!

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಹೋರಾಟಗಳು ತೀವ್ರಗೊಂಡಿದೆ. ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ಐತಿಹಾಸಿಕ ರೈತ ಹೋರಾಟ 83ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಕಿಸಾನ್ ಮಹಾಪಂಚಾಯತ್‌ಗಳು ಆರಂಭವಾಗಿ ಬಿಜೆಪಿಗೆ ತಲೆನೋವಾಗಿವೆ. ಉತ್ತರ ಭಾರತದಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಟದ ಕಾವು ಎಷ್ಟರ ಮಟ್ಟಿಗೆ ಇದೆ ಎಂದರೆ ಅಲ್ಲಿನ ಜನರು ತಮ್ಮ ಮದುವೆ ಆಮಂತ್ರಣ ಪತ್ರಗಳಲ್ಲಿ ಕೂಡಾ ಕೃಷಿ ವಿರೋಧಿ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಬರೆಸುತ್ತಿದ್ದಾರೆ!

Photo Courtesy: India.com

ಹರಿಯಾಣದ ಸ್ಥಳೀಯ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದೆ. ವರದಿಯಲ್ಲಿ ಮದುವೆ ಆಮಂತ್ರಣ ಪತ್ರಗಳನ್ನು ಮುದ್ರಿಸುವ ಮುದ್ರಕರ ಬಳಿಗೆ ಬರುವ ಗ್ರಾಹಕರು, ರೈತ ಹೋರಾಟದ ಘೋಷಣೆಗಳನ್ನು ಮುದ್ರಿಸಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದುವೆ ಆಮಂತ್ರಣ ಪತ್ರಗಳಲ್ಲಿ ಜಾತಿ ಸೂಚಕ, ಧರ್ಮಸೂಚಕ ಚಿನ್ನೆಗಳು ಅಥವಾ ಚಿತ್ರಗಳನ್ನು ಮಾತ್ರ ಮುದ್ರಿಸಲು ಹೇಳುತ್ತಿದ್ದ ಗ್ರಾಹಕರು ಇತ್ತೀಚೆಗೆ ಭಗತ್‌ ಸಿಂಗ್, ಅಂಬೇಡ್ಕರ್‌, ಸಾವಿತ್ರಿ ಬಾಯಿ ಮುಂತಾದ ಮಹಾಪುರುಷರ ಚಿತ್ರಗಳನ್ನು ಮುದ್ರಿಸಲು ಬೇಡಿಕೆಯಿಡುತ್ತಿದ್ದಾರೆ!

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

”ಚಿತ್ರದಲ್ಲಿ ಕಾಣುವ ಮದುಮಗನ ಹೆಸರು ಜಗದೀಪ್ ಸಿಂಗ್ (30 ವರ್ಷ). ತಂದೆ ನಿವೃತ್ತ ಸೈನಿಕರು. ತನ್ನ ಮದುವೆಯ ದಿಬ್ಬಣ ಹೋಗುವಾಗ ಬರ್ನಾಲಾ ಎಂಬಲ್ಲಿ ಕಳೆದ 101 ದಿನಗಳಿಂದ ಚಳುವಳಿ ನಡೆಸುತ್ತಿರುವ ರೈತರು ಆತ‌ನ ಕಣ್ಣಿಗೆ ಬಿದ್ದರು. ತಕ್ಷಣ ದಿಬ್ಬಣ ನಿಲ್ಲಿಸಿದ ಮದುಮಗ ಜಗದೀಪ್ ದಿಬ್ಬಣದವರ ಸಮೇತ ರೈತರ ಜೊತೆ ಒಂದು ಗಂಟೆ ಕುಳಿತು ಅವರಿಗೆ ತನ್ನ ಬೆಂಬಲ ಘೋಷಿಸಿ, ಮದುವೆ ಹಾಲ್ ಕಡೆ ನಡೆದರು. ಹೋಗುವ ಮುನ್ನ ‘ಇದನ್ನು ಕೇಳಿ ಕಮಲ್ ಪ್ರೀತ್ (ಮದುಮಗಳು) ನನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತಾಳೆ’ ಎಂದು ಹೇಳಲು ಜಗದೀಪ್ ಮರೆಯಲಿಲ್ಲ” ಎಂದು ತಾನು ಕಂಡ ಘಟನೆಯ ಬಗ್ಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ರಾಜಸ್ಥಾನ, ಪಂಜಾಬ್, ಹರಿಯಾಣದಲ್ಲಿ ದಂಪತಿಗಳು ರೈತರ ಚಳುವಳಿ ಘೋಷಣೆಗಳನ್ನು ಮುದ್ರಿಸಿ ಹಾಡುತ್ತಿದ್ದಾರೆ. ಹಲವು ನವ ದಂಪತಿಗಳು ತಮ್ಮ ಮದುವೆ ಊಟವನ್ನು ರೈತ ಹೋರಾಟಗಾರರಿಗೆ ಹಂಚಿಕೊಳ್ಳುತ್ತಿದ್ದಾರೆ. ಪಂಜಾಬಿ ಮದುವೆಗಳಲ್ಲಿ ಹಾಡು ಹಾಡುವ ನೋರಾ ಝೋರಾ ಗಿಡ್ಡಾ ಗುಂಪಿನ ಪ್ರಕಾರ, (ದೆಲ್ಲಿನೂ ಚಲಿಯೆ, ಜಾಕೆ ಮೋದಿನು ಘೆರಿಯೆ, ಹೇ ಸಮಾಲೋ) “ದೆಹಲಿಗೆ ಹೊರಡೋಣ, ಮೋದಿಯನ್ನು ಮುತ್ತಿಗೆ ಹಾಕೋಣಾ” ಎಂಬ ಹಾಡು ಜನಪ್ರಿಯವಾಗಿದೆ. ಜನರು ಮದುವೆಗಳಲ್ಲೂ ಈ ಹಾಡನ್ನೂ ಸಾಮೂಹಿಕವಾಗಿ ಹಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಇದುವರೆಗೂ ತಾನು ಜಾರಿಗೆ ತಂದಿರುವ ಕೃಷಿ ಕಾನೂನನ್ನು ಸಮರ್ಥಿಸುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿದ್ದಾರೆ. ಆದರೆ ಜನರು ವಿಭಿನ್ನವಾಗಿ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಸಿಎಎ ವಿರುದ್ದದ ಹೋರಾಟದಲ್ಲಿ ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ನವದಂಪತಿಗಳು “ಸಿಎಎ ಬೇಡ” ಎಂಬ ಘೋಷಣೆಗಳಿರುವ ಕಾರ್ಡ್‌ಗಳನ್ನು ಹಿಡಿದು ನಡೆಯುತ್ತಿರುವ, ಹೋರಾಟದಲ್ಲಿ ತಾವೂ ಭಾಗಿಯಾಗಿ ಬೆಂಬಲ ನೀಡುತ್ತಿದ್ದದ್ದು ವರದಿಯಾಗಿತ್ತು. ಅದರಂತೆ ಈ ವರ್ಷವು ಕೃಷಿ ಕಾನೂನನ್ನು ವಿರೋಧಿಸಿ ಇಂತಹದೆ ಘಟನೆಗಳು ವರದಿಯಾಗಿದೆ.

ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...