Homeಮುಖಪುಟಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

- Advertisement -
- Advertisement -

ಜನವರಿ 16ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ನಿನ್ನೆ ಪ್ರಧಾನಿ ಮೋದಿಯವರು ತಮಿಳುನಾಡಿನಲ್ಲಿ ಚನ್ನೈ ಮೆಟ್ರೋ ಸೇರಿದಂತೆ ಹಲವು ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಆಹ್ವಾನ ಪತ್ರಿಕೆ, ವೇದಿಕೆಯ ಬ್ಯಾನರ್ ಮತ್ತು ಭಾಷಣ ಸೇರಿದಂತೆ ಎಲ್ಲಿಯೂ ಹಿಂದಿ ಬಳಸಿಲ್ಲ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದೆ. ಹಾಗಾಗಿ ಇಲ್ಲಿನ ಬಿಜೆಪಿ ಮುಖಂಡರು ಹೈಕಮಾಂಡ್‌ ಅನ್ನು ಒಲೈಸುವುದಕ್ಕಾಗಿ ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಾರೆ. ಆದರೆ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ಚಳವಳಿ ಇದೆ. ಅಲ್ಲದೇ ಅಲ್ಲಿ ಬಿಜೆಪಿ ಸರ್ಕಾರವಿಲ್ಲ. ಬಿಜೆಪಿಯ ಮಿತ್ರ ಪಕ್ಷಗಳು ಸಹ ಹಿಂದಿ ಹೇರಿಕೆಗೆ ಭಯಪಡುತ್ತಾರೆ. ಹಾಗಾಗಿ ಅಲ್ಲಿ ಹಿಂದಿ ಹೇರಿಕೆ ನಡೆಯುವುದಿಲ್ಲ. ಕರ್ನಾಟಕಕ್ಕೆ ಈ ಅನ್ಯಾಯ ಏಕೆ ಎಂದು ಕನ್ನಡಿಗರು ಪ್ರಶ್ನಿಸಿದ್ದಾರೆ.

ಮೋದಿ ಕೇರಳದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಅಲ್ಲಿ ಮಾತಾಡ್ತಾರೆ, ಅದಕ್ಕೆ ಮಲಯಾಳಂ ಅನುವಾದ ಸಹ ಇರುತ್ತೆ. ಅದೇ ನಮ್ಮಲ್ಲಿಗೆ ಬಂದ್ರೆ ಹಿಂದಿಲಿ ಮಾತಾಡ್ತಾರೆ, ಕನ್ನಡದ ಅನುವಾದ ಸಹ ಇರೋಲ್ಲ. ಕರಾವಳಿ ಜನ ಅಂತೂ ಅನುವಾದ ಬೇಡ ಅಂತಾರೆ. ಬಿಜೆಪಿನ ಗೆಲ್ಲಿಸಿದ್ದಕ್ಕೆ ನಮಗೆ ಸಿಗೋದು ಏನಪ್ಪಾ ಅಂದ್ರೆ #ಹಿಂದಿಹೇರಿಕೆ ಎಂದು ಸತ್ಯ ಹೊಳ್ಳ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡಿನಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ತಮಿಳು ಇರುತ್ತದೆ, ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರೊಲ್ಲಾ. ಇದರ ಅರ್ಥ, ಸಾವಿರಾರು ವರ್ಷ ಸ್ವಾಭಿಮಾನಿಗಳಾಗಿ ಬದುಕಿದ್ದ ಕನ್ನಡಿಗರು ಹುಸಿ ದೇಶಪ್ರೇಮದ ಹೆಸರಲ್ಲಿ ಸ್ವಾಭಿಮಾನ ಮರೆತು ಬದುಕುತ್ತಿದ್ದೇವೆ ಎಂದು ಅರುಣ್ ಜಾವಗಲ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷದಲ್ಲಿರೋ ಕಾಂಗ್ರೆಸ್ ನಾಯಕರೇ ಆಗಲಿ ಆಡಳಿತ ಪಕ್ಷ ಬಿಜೆಪಿಯ ನಾಯಕರೇ ಆಗಲಿ ಹಿಂದಿ ಹೇರಿಕೆ ಸಲ್ಲದು ಎಂದು ಕನ್ನಡ ಕಟ್ಟಾಳುಗಳಂತೆ ಮಾತಾಡ್ತಾರೆಯೇ ಹೊರತು, ಸಂವಿಧಾನ ತಿದ್ದುಪಡಿ ಮಾಡಿ ಹಿಂದಿಗಿರುವ ಹೆಚ್ಚುಗಾರಿಕೆಯನ್ನು ಹಾಗೂ ಹಿಂದಿ ಹೇರಲು ಸಂವಿಧಾನದಲ್ಲಿರುವ ವ್ಯವಸ್ಥೆಯನ್ನು ಹತ್ತಿಕ್ಕುವ ಬಗ್ಗೆ ಮಾತಾಡಲ್ಲ ಎಂದು ರಾಮಚಂದ್ರ ಎಂ ಟ್ವೀಟ್ ಮಾಡಿದ್ದಾರೆ.

ಭಾಷೆಯ ವಿಚಾರದಲ್ಲಿ ಕರುಣಾನಿಧಿ ಹೋರಾಟ ಅಷ್ಟು ಮಹತ್ವ ಪಡೆದಿದೆ. ಶತಮಾನಗಳು ಕಳೆದರೂ ತಮಿಳರು ಹಿಂದಿ ಹೇರಿಕೆ ಸಹಿಸುವುದಿಲ್ಲ!. ಕನ್ನಡಿಗರ ಕತೆ, “ಮೂರು ಕೊಟ್ಟರೆ ಮಾವನ ಕಡೆ, ಆರು ಕೊಟ್ಟರೆ ಅತ್ತೆ ಕಡೆ” ಎಂದು ವೆಂಕಟರಾಮು ವ ಎಂಬುವವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವೂ ಕೂಡಾ ತಮಿಳುನಾಡಿನವರಂತೆ ದ್ವಿಭಾಷಾ ಸೂತ್ರಕ್ಕಾಗಿ ಒತ್ತಾಯಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...