Homeಕರ್ನಾಟಕರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಗಳನ್ನು RSS ‌ನ ಜನರು ಗುರುತು ಮಾಡುತ್ತಿರುವ ಬಗ್ಗೆ ಬಹಳ ದಿನಗಳಿಂದ ಆರೋಪಗಳು ಕೇಳಿ ಬಂದಿತ್ತು. ಇದೀಗ ಜೆಡಿಎಸ್ ನಾಯಕ ಮಾಜಿ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆಗಳನ್ನು RSS ‌‌ನವರು ಗುರುತು ಮಾಡುತ್ತಿದ್ದಾರೆ” ಎಂಬ ಅಘಾತಕಾರಿ ಮಾಹಿತಿಯನ್ನು ಹೊಗೆಡವಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ RSS ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. RSS ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವಕಾಶ ಸಿಕ್ಕ ಕೂಡಲೇ ಮನುವಾದಿಗಳೊಂದಿಗೆ ಮದುಚಂದ್ರ ಆಚರಿಸುವುದು, ಅವಕಾಶ ಇಲ್ಲದಿದ್ದರೆ ಗೋಳಾಡುವುದು; ಕುಮಾರಸ್ವಾಮಿಯವರ ಈ ಎಡಬಿಡಂಗಿತನದಿಂದಾಗಿ, ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಬಹುದಾಗಿದ್ದ ಜೆ.ಡಿ.ಎಸ್. ಇಂದು ಅವನತಿಯ ಅಂಚಿಗೆ ಬಂದು ನಿಂತಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...