Homeಮುಖಪುಟಹಿಂಸೆಯ ಮಾತುಗಳನ್ನಾಡಿದ ಹರಿಯಾಣ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ: ಬೆಂಗಳೂರಿನಲ್ಲಿ ದೂರು ದಾಖಲು

ಹಿಂಸೆಯ ಮಾತುಗಳನ್ನಾಡಿದ ಹರಿಯಾಣ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ: ಬೆಂಗಳೂರಿನಲ್ಲಿ ದೂರು ದಾಖಲು

ಗೃಹ ಸಚಿವ ಅನಿಲ್ ವಿಜ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ದ್ವೇಷದ ಮಾತುಗಳ ವಿರುದ್ಧ ಜನಾಂದೋಲನ ಸಂಘಟನೆ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ದೂರು ಸಲ್ಲಿಸಿದೆ.

- Advertisement -
- Advertisement -

ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿ “ದೇಶ ವಿರೋಧಿ ಬೀಜ ಯಾರೆಲ್ಲರ ಮನಸ್ಸಲ್ಲಿದೆಯೋ ಅವರೆಲ್ಲರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದು ದಿಶಾ ರವಿಯಾಗಿರಲಿ ಅಥವಾ ಬೇರೆಯವರಾಗಲಿ” ಎಂದು ಹೇಳಿದ್ದಾರೆ.

ಇನ್ನು ದ್ವೇಷ ಮತ್ತು ಹಿಂಸೆಯ ಮಾತುಗಳನ್ನಾಡಿದ ಹರಿಯಾಣ ಗೃಹ ಸಚಿವ ಅನಿಲ್ ವಿಜ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ದ್ವೇಷದ ಮಾತುಗಳ ವಿರುದ್ಧ ಜನಾಂದೋಲನ (Campaign Against hate speech) ಸಂಘಟನೆ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ದೂರು ಸಲ್ಲಿಸಿದೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಿಶಾರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ತೆಗೆದುಕೊಳ್ಳಬೇಕು, ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸಿದ ಬೆಂಗಳೂರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಈ ಪ್ರಕರಣದಲ್ಲಿ ಬೆಂಗಳೂರು ಮತ್ತು ದೆಹಲಿ ಪೊಲೀಸರ ನಡುವಿನ ಯಾವುದೇ ಪತ್ರ ವ್ಯವಹಾರ ನಡೆದಿಲ್ಲ ಹಾಗಾಗಿ ಈ ಅಕ್ರಮ ಬಂಧನದ ಬಗ್ಗೆ ವಿಚಾರಣೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿ: ಪ್ರತಿಭಟನಾ ನಿರತ 72 ವರ್ಷದ ರೈತ ಹೃದಯಾಘಾತದಿಂದ ಸಾವು

ರೈತ ಹೋರಾಟಕ್ಕೆ ಸಂಬಂಧಿಸಿ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್‌ ಪ್ರಕರಣ ಸಂಬಂಧಿಸಿ ಭಾನುವಾರ ಬೆಂಗಳೂರಿನ 21 ವರ್ಷದ ಯುವತಿ ದಿಶಾ ರವಿಯನ್ನು ಬಂಧಿಸಿದ್ದರು. ಈ ಹಿನ್ನಲೆಯಲ್ಲಿ ಹರಿಯಾಣ ಗೃಹಮಂತ್ರಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಕಾನೂನು ಬಾಹಿರ ಎಂದು ಹೇಳಿದ್ದರು. ಆದರೆ ಇದೀಗ ಟ್ವೀಟರ್‌ ಅವರಿಗೆ ನೋಟಿಸ್ ನೀಡಿದ್ದು, “ಜರ್ಮನಿಯಲ್ಲಿ ಟ್ವೀಟ್ ಬಗ್ಗೆ ದೂರು ನೀಡಲಾಗಿತ್ತು. ನಾವು ಇದನ್ನು ಪರಿಶೀಲಿಸಿದ್ದು ಜರ್ಮನಿ ಅಥವಾ ಟ್ವಿಟರ್‌ ಕಾನೂನಿನ ಪ್ರಕಾರ ಇದರಲ್ಲಿ ಯಾವುದೆ ಕಾನೂನುಬಾಹಿರ ವಿಷಯ ಇಲ್ಲ. ಆದ್ದರಿಂದ ಇದರ ಬಗ್ಗೆ ಯಾವುದೆ ಕ್ರಮಕೈಗೊಳ್ಳುವುದಿಲ್ಲ” ಎಂದು ಹೇಳಿದೆ. ಈ ನೋಟಿಸ್‌ನ ಸ್ಕ್ರೀನ್‌ಶಾಟ್‌ ಅನ್ನು ಅವರು ಟ್ವೀಟ್ ಮಾಡಿದ್ದಾರೆ.

ದಿಶಾ ರವಿ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಷ್ಟೇ ಅಲ್ಲದೆ ಪೊಲೀಸರು ಇದೇ ಪ್ರಕರಣದಲ್ಲಿ ನಿಕಿತಾ ಜಾಕೋಬ್ ಮತ್ತು ಶಾಂತನು ಎಂಬವರಿಗೆ ಜಾಮೀನು ರಹಿತ ವಾರಂಟ್ ಕಳುಹಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿಕಿತಾ ಜಾಕೋಬ್ ಅವರು ನಾಲ್ಕು ವಾರಗಳ ಬಂಧನದಿಂದ ರಕ್ಷಣೆಗಾಗಿ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.


ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...