Homeಮುಖಪುಟ’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ

- Advertisement -
- Advertisement -

ಬಿಜೆಪಿಯ ಐಟಿ ಸೆಲ್‌‌ ತಾವು ಆಡಳಿತ ಪಕ್ಷದ ಕಾರ್ಯಕರ್ತರು ಎಂದು ಹೇಳಿಕೊಂಡು ಜನರಿಗೆ ಕರೆ ಮಾಡಿ, ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.

“ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ. ಕರೆ ಮಾಡಿ, ಮುಂಬರುವ ಚುನಾವಣೆಯಲ್ಲಿ ಈ ಪ್ರಾಧ್ಯಾಪಕರು ಯಾರಿಗೆ ಮತ ಹಾಕುತ್ತಾರೆಂದು ತಿಳಿಯಲು ಬಯಸಿದ್ದರು. ಅಲ್ಲದೆ ಅವರು ಸಾಕಷ್ಟು ತಪ್ಪು ಮಾಹಿತಿ ಸೇರಿದಂತೆ ಅವಮಾನಕರವಾಗಿ ಮಾತನಾಡಿದ್ದರು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

“ಆದರೆ ಪ್ರಾಧ್ಯಾಪಕರು ಈ ಸಂಖ್ಯೆಗಳನ್ನು ಪರಿಶೀಲಿಸಿದಾಗ ಅವರು ಟಿಎಂಸಿಗೆ ಕಾರ್ಯಕರ್ತರಲ್ಲ ಎಂದು ತಿಳಿದುಬಂದಿದೆ. ಇದು ಬಿಜೆಪಿ ಐಟಿ ಸೆಲ್‌ನ ಕೆಟ್ಟ ಕೆಲಸ. ಕೂಡಲೇ ತನಿಖೆ ಆರಂಭಿಸುವಂತೆ ಪೊಲೀಸರನ್ನು ಕೇಳುತ್ತಿದ್ದೇನೆ. ಜನರು ಅನುಮಾನಾಸ್ಪದ ಸಂಖ್ಯೆಗಳಿಂದ ಕರೆಗಳನ್ನು ಸ್ವೀಕರಿಸಬಾರದು ಮತ್ತು ಒಂದು ವೇಳೆ ಇಂತಹ ಕರೆಗಳು ಬಂದರೆ ಪೊಲೀಸರಿಗೆ ದೂರು ಸಲ್ಲಿಸಿ ಎಂದು ಮನವಿ ಮಾಡುತ್ತೇನೆ. ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಕಲಿ ಸುದ್ದಿಗಳನ್ನು ಹರಡುವಲ್ಲಿ ಬಿಜೆಪಿಯ ಐಟಿ ಸೆಲ್ ಪ್ರಾವಿಣ್ಯತೆ ಹೊಂದಿದೆ. ಯಾವುದೆ ವಿಷಯವನ್ನು ಸಾವಿರಾರು ವಾಟ್ಸಪ್ ಗುಂಪುಗಳ ಮೂಲಕ ವೈರಲ್ ಮಾಡಬಹುದು ಎಂದು ಅಮಿತ್ ಶಾ ಅವರೇ ಒಮ್ಮ ಹೇಳಿಕೊಂಡಿದ್ದರು” ಎಂದು ಮಮತಾ ಹೇಳಿದ್ದಾರೆ.

ಆದರೆ ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ ರಿತೇಶ್ ತಿವಾರಿ ಮಮತಾ ಅವರ ಆರೋಪವನ್ನು ಅಲ್ಲಗೆಳೆದಿದ್ದು, ಅವರು ರೂಡಿಗತ ಸುಳ್ಳುಗಾರ್ತಿ ಎಂದು ಹೇಳಿದ್ದಾರೆ.

“ಮಮತಾ ಅವರು ರೂಡಿಗತ ಸುಳ್ಳುಗಾರ್ತಿ ಎಂದು ಬಂಗಾಳದ ಜನರಿಗೆ ತಿಳಿದಿದೆ. ಶಿಕ್ಷಕ ಸಮುದಾಯದ ಸಹಾನುಭೂತಿ ಪಡೆಯಲು ಅವರು ಈ ಕಥೆಗಳನ್ನು ಹಣೆಯುತ್ತಿದ್ದಾರೆ. ಅವರು ಆರೋಪಿಸಿದಂತೆ ನಡೆದಿದ್ದರೆ ಕರೆಗಳ ದಾಖಲೆಗಳು ಮತ್ತು ಸಂಭಾಷಣೆಗಳ ಆಡಿಯೊ ರೆಕಾರ್ಡಿಂಗ್‌ಗಳನ್ನು ಯಾಕೆ ಬಹಿರಂಗಪಡಿಸಿಲ್ಲ. ನಾನು ಅವರಿಗೆ ಸವಾಲು ಹಾಕುತ್ತಿದ್ದೇನೆ, ಅವರಿಗೆ ಸಾಧ್ಯವಾದರೆ ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್‌‌ನ ಒಳಗೊಳ್ಳುವಿಕೆಯನ್ನು ಸಾಬೀತುಪಡಿಸಲಿ” ಎಂದು ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...