Homeಮುಖಪುಟ’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ

- Advertisement -
- Advertisement -

ಬಿಜೆಪಿಯ ಐಟಿ ಸೆಲ್‌‌ ತಾವು ಆಡಳಿತ ಪಕ್ಷದ ಕಾರ್ಯಕರ್ತರು ಎಂದು ಹೇಳಿಕೊಂಡು ಜನರಿಗೆ ಕರೆ ಮಾಡಿ, ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.

“ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ. ಕರೆ ಮಾಡಿ, ಮುಂಬರುವ ಚುನಾವಣೆಯಲ್ಲಿ ಈ ಪ್ರಾಧ್ಯಾಪಕರು ಯಾರಿಗೆ ಮತ ಹಾಕುತ್ತಾರೆಂದು ತಿಳಿಯಲು ಬಯಸಿದ್ದರು. ಅಲ್ಲದೆ ಅವರು ಸಾಕಷ್ಟು ತಪ್ಪು ಮಾಹಿತಿ ಸೇರಿದಂತೆ ಅವಮಾನಕರವಾಗಿ ಮಾತನಾಡಿದ್ದರು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

“ಆದರೆ ಪ್ರಾಧ್ಯಾಪಕರು ಈ ಸಂಖ್ಯೆಗಳನ್ನು ಪರಿಶೀಲಿಸಿದಾಗ ಅವರು ಟಿಎಂಸಿಗೆ ಕಾರ್ಯಕರ್ತರಲ್ಲ ಎಂದು ತಿಳಿದುಬಂದಿದೆ. ಇದು ಬಿಜೆಪಿ ಐಟಿ ಸೆಲ್‌ನ ಕೆಟ್ಟ ಕೆಲಸ. ಕೂಡಲೇ ತನಿಖೆ ಆರಂಭಿಸುವಂತೆ ಪೊಲೀಸರನ್ನು ಕೇಳುತ್ತಿದ್ದೇನೆ. ಜನರು ಅನುಮಾನಾಸ್ಪದ ಸಂಖ್ಯೆಗಳಿಂದ ಕರೆಗಳನ್ನು ಸ್ವೀಕರಿಸಬಾರದು ಮತ್ತು ಒಂದು ವೇಳೆ ಇಂತಹ ಕರೆಗಳು ಬಂದರೆ ಪೊಲೀಸರಿಗೆ ದೂರು ಸಲ್ಲಿಸಿ ಎಂದು ಮನವಿ ಮಾಡುತ್ತೇನೆ. ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಕಲಿ ಸುದ್ದಿಗಳನ್ನು ಹರಡುವಲ್ಲಿ ಬಿಜೆಪಿಯ ಐಟಿ ಸೆಲ್ ಪ್ರಾವಿಣ್ಯತೆ ಹೊಂದಿದೆ. ಯಾವುದೆ ವಿಷಯವನ್ನು ಸಾವಿರಾರು ವಾಟ್ಸಪ್ ಗುಂಪುಗಳ ಮೂಲಕ ವೈರಲ್ ಮಾಡಬಹುದು ಎಂದು ಅಮಿತ್ ಶಾ ಅವರೇ ಒಮ್ಮ ಹೇಳಿಕೊಂಡಿದ್ದರು” ಎಂದು ಮಮತಾ ಹೇಳಿದ್ದಾರೆ.

ಆದರೆ ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ ರಿತೇಶ್ ತಿವಾರಿ ಮಮತಾ ಅವರ ಆರೋಪವನ್ನು ಅಲ್ಲಗೆಳೆದಿದ್ದು, ಅವರು ರೂಡಿಗತ ಸುಳ್ಳುಗಾರ್ತಿ ಎಂದು ಹೇಳಿದ್ದಾರೆ.

“ಮಮತಾ ಅವರು ರೂಡಿಗತ ಸುಳ್ಳುಗಾರ್ತಿ ಎಂದು ಬಂಗಾಳದ ಜನರಿಗೆ ತಿಳಿದಿದೆ. ಶಿಕ್ಷಕ ಸಮುದಾಯದ ಸಹಾನುಭೂತಿ ಪಡೆಯಲು ಅವರು ಈ ಕಥೆಗಳನ್ನು ಹಣೆಯುತ್ತಿದ್ದಾರೆ. ಅವರು ಆರೋಪಿಸಿದಂತೆ ನಡೆದಿದ್ದರೆ ಕರೆಗಳ ದಾಖಲೆಗಳು ಮತ್ತು ಸಂಭಾಷಣೆಗಳ ಆಡಿಯೊ ರೆಕಾರ್ಡಿಂಗ್‌ಗಳನ್ನು ಯಾಕೆ ಬಹಿರಂಗಪಡಿಸಿಲ್ಲ. ನಾನು ಅವರಿಗೆ ಸವಾಲು ಹಾಕುತ್ತಿದ್ದೇನೆ, ಅವರಿಗೆ ಸಾಧ್ಯವಾದರೆ ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್‌‌ನ ಒಳಗೊಳ್ಳುವಿಕೆಯನ್ನು ಸಾಬೀತುಪಡಿಸಲಿ” ಎಂದು ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...