Homeಮುಖಪುಟಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ರೈತ ಹೋರಾಟ ಮತ್ತು ಸಂವಿಧಾನ ರಕ್ಷಣೆಯ ಕುರಿತು ಡಾ.ಬಿ.ಪಿ ಮಹೇಶ ಚಂದ್ರಗುರುರವರ ಲೇಖನ

- Advertisement -
- Advertisement -

ಭಾರತ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಭಾರತದಲ್ಲಿ ಸಭ್ಯವಾಗಿ, ಅಹಿಂಸಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸಿ ವಿಶ್ವದ ಗಮನ ಸೆಳೆದಿದ್ದಾರೆ. ಪ್ರಗತಿಪರ ಚಿಂತಕರು, ಕಾನೂನು ತಜ್ಞರು ಮತ್ತು ರೈತರ ಮುಖಂಡರು ಹೊಸ ಕಾನೂನುಗಳು ಮೂಲಭೂತವಾಗಿ ಕಾರ್ಪೊರೇಟ್ ವಲಯಕ್ಕೆ ಪ್ರಯೋಜನ ಉಂಟುಮಾಡಿ ಭಾರತದ ಆರ್ಥಿಕತೆಯ ಬೆನ್ನೆಲುಬನ್ನು ಮುರಿಯುತ್ತವೆಯೆಂದು ತೀವ್ರವಾಗಿ ವಾದಿಸಿದ್ದಾರೆ. ದೊಡ್ಡ ಉದ್ದಿಮೆಗಳು ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು ಮತ್ತು ತರಕಾರಿಗಳನ್ನು ಸಂಗ್ರಹಿಸಿ ತಮಗೆ ಬೇಕಾದ ಹಾಗೆ ಮಾರಾಟ ಮಾಡಿ ರೈತರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಮತ್ತು ಭಾರತೀಯ ಸಮಾಜದ ಇತರ ಅಂಚಿನಲ್ಲಿರುವ ವರ್ಗಗಳ ಜೀವನದ ಮೇಲೆ ಮಾರಣಾಂತಿಕ ಪರಿಣಾಮ ಬೀರುವುದಾಗಿ ಚಳುವಳಿಗಾರರು ಪ್ರತಿಪಾದಿಸಿದ್ದಾರೆ. ಇದರ ಪರಿಣಾಮವಾಗಿ, ಕೆಲವು ದೊಡ್ಡ ಉದ್ದಿಮೆಗಳು ಸುಮಾರು 90%ರಷ್ಟು ಕೃಷಿ ವ್ಯವಹಾರವನ್ನು ನಿಯಂತ್ರಿಸುವ, ಆರ್ಥಿಕ ಏಕಸ್ವಾಮ್ಯ ಸಾಧಿಸುವ ಮತ್ತು ಜನಸಾಮಾನ್ಯರ ಜೀವನೋಪಾಯ ಮಾರ್ಗಗಳನ್ನು ಕಸಿದುಕೊಳ್ಳುವ ಬಹುದೊಡ್ಡ ಅಪಾಯ ಎದುರಾಗಿದೆ.

ಪಟ್ಟಭದ್ರ ಹಿತಾಸಕ್ತಿಗಳು ನಿರಂತರವಾಗಿ ಸಮಾಜ, ಆರ್ಥಿಕತೆ, ರಾಜಕಾರಣ, ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ತಮ್ಮ ಏಕಸ್ವಾಮ್ಯವನ್ನು ಸುಸ್ಥಿರಗೊಳಿಸಲು ಎಲ್ಲ ಬಗೆಯ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಅಡ್ಡಿಪಡಿಸುತ್ತವೆ. ಜನವರಿ 26ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಬೆಂಬಲಿಗರ ಕೈವಾಡವಿರುವುದನ್ನು ದೇಶದ ಜನತೆ ಆತಂಕದಿಂದ ಗಮನಿಸಿದ್ದಾರೆ. ತಮ್ಮ ಆತ್ಮಸಾಕ್ಷಿ, ಸ್ವಂತ ಬಲ ಮತ್ತು ಸಂಪನ್ಮೂಲಗಳ ಆಧಾರದ ಮೇಲೆ ಸುಮಾರು 3 ತಿಂಗಳಿನಿಂದ ತಮ್ಮ ಮೂಲಭೂತ ಹಕ್ಕುಗಳಿಗಾಗಿ ಸಾಂವಿಧಾನಿಕ ರಕ್ಷಣೆಗಳಿಗೆ ಅನುಸಾರವಾಗಿ ಅಹಿಂಸಾತ್ಮಕ ಸತ್ಯಾಗ್ರಹ ನಡೆಸುತ್ತಿರುವ ರೈತರು ವಿದೇಶಿ ಸಂಸ್ಥೆಗಳಿಂದ ಆರ್ಥಿಕ ನೆರವು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದಿರುವುದಾಗಿ ಹೊಲಸು ಹೇಳಿಕೆ ನೀಡಿ ಚಳುವಳಿಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವ ರೈತವಿರೋಧಿಗಳನ್ನು ಪ್ರಜ್ಞಾವಂತರು ಖಂಡಿಸಲೇಬೇಕು. ಪ್ರತಿಭಟನಾ ನಿರತ ರೈತರು ಅಪ್ಪಟ ದೇಶಭಕ್ತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಆಧಾರದ ಮೇಲೆ ರೈತ ವಿರೋಧಿ ಕಾನೂನುಗಳ ವಿರುದ್ಧ ದೀರ್ಘಕಾಲಿಕ ಹೋರಾಟ ನಡೆಸಲು ಪ್ರಾಮಾಣಿಕವಾಗಿ ಸಜ್ಜುಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆರ್ಥಿಕ ಮತ್ತು ರಾಜಕೀಯ ಏಕಸ್ವಾಮ್ಯಕ್ಕೆ ಬದ್ಧರಾಗಿ ಸಾಮಾಜಿಕ ನ್ಯಾಯ ಮತ್ತು ಪ್ರಜಾಸತ್ತಾತ್ಮಕ ಹೋರಾಟಗಳನ್ನು ಭಗ್ನಗೊಳಿಸುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳನ್ನು ಪ್ರಜ್ಞಾವಂತರು ಒಕ್ಕೊರಲಿನಿಂದ ಖಂಡಿಸಬೇಕು.

ಪ್ರತಿಭಟನಾ ಸ್ಥಳಗಳಲ್ಲಿ ತಾತ್ಕಾಲಿಕ ನಾಗರೀಕ ಸೌಲಭ್ಯಗಳನ್ನು ರೈತರೇ ಸ್ವತಹ ಏರ್ಪಾಟು ಮಾಡಿಕೊಂಡು ದೀರ್ಘಾವಧಿಯವರೆಗೆ ಭಾರತದ ಆರ್ಥಿಕತೆಯ ಬೆನ್ನೆಲುಬಾದ ಕೃಷಿಯನ್ನು ರಕ್ಷಿಸಲು ಹೊರಟಿರುವುದು ಆಶಾದಾಯಕ ಸಂಗತಿಯಾಗಿದೆ. ಇವರು ಹೆದ್ದಾರಿಯುದ್ದಕ್ಕೂ ಪಾದಚಾರಿ ವ್ಯವಸ್ಥೆಯನ್ನು ದುರಸ್ಥಿಗೊಳಿಸಿ ಆಂದೋಲನ ನಡೆಸುತ್ತಿರುವ ರೈತರ ಸೌಕರ್ಯವನ್ನು ಹೆಚ್ಚಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರೈತ ವಿರೋಧಿ ಶಕ್ತಿಗಳು ಮತ್ತು ಮಾರುಕಟ್ಟೆ ಶಕ್ತಿಗಳ ನಡುವಣ ಅನೈತಿಕ ಮೈತ್ರಿಯಿಂದಾಗಿ ಕೃಷಿ ಕ್ಷೇತ್ರವನ್ನು ದುರ್ಬಲಗೊಳಿಸಿ ಅನ್ನದಾತರ ಬದುಕನ್ನು ಅತಂತ್ರಗೊಳಿಸಲು ಹೊರಟಿರುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳು ಪ್ರಗತಿಪರ ಭಾರತೀಯರ ಅಂತರರಾಷ್ಟ್ರೀಯ ಸಮುದಾಯದ ಉಗ್ರ ಖಂಡನೆಗೆ ಗುರಿಯಾಗಿದೆ.

ಸರ್ಕಾರ, ನ್ಯಾಯಾಂಗ, ಮಾಧ್ಯಮ ಮತ್ತು ನಾಗರೀಕ ಸಮಾಜಗಳು ಪ್ರತಿಭಟನಾ ನಿರತ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಆಲಿಸಿ ರಾಜ್ಯ ನಿರ್ದೇಶಕ ತತ್ವಗಳು ಮತ್ತು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿರುವ ಕೃಷಿ ಕಾನೂನುಗಳನ್ನು ರದ್ಧುಗೊಳಿಸುವಂತೆ ಭಾರತ ಸರ್ಕಾರದ ಮೇಲೆ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳು ಒತ್ತಾಯ ಹೇರಿವೆ.

ಭಾರತ ಸರ್ಕಾರವು ಜಾರಿಗೊಳಿಸಿರುವ ಅಸಾಂವಿಧಾನಿಕ ಹಾಗೂ ಅಮಾನವೀಯ ರೈತ ವಿರೋಧಿ ಕಾನೂನುಗಳ ವಿರುದ್ಧ ಯೂರೋಪ್, ಅಮೇರಿಕಾ ಮೊದಲಾದೆಡೆ ಅಂತರರಾಷ್ಟ್ರೀಯ ಸಾರ್ವಜನಿಕ ಅಭಿಪ್ರಾಯ ಹೆಚ್ಚುತ್ತಲಿದೆ. ರಿಹಾನ್ನಾ, ಗ್ರೇಟಾ ಥನ್‌ಬರ್ಗ್ ಮೊದಲಾದ ಪ್ರಜ್ಞಾವಂತ ಹೆಣ್ಣುಮಕ್ಕಳು ಭಾರತದ ರೈತರ ಬಗ್ಗೆ ವ್ಯಕ್ತಪಡಿಸಿರುವ ಮಾನವೀಯ ಕಾಳಜಿ ಪ್ರಶಂಸನೀಯವಾಗಿದೆ. ಆದರೆ ಚಲನಚಿತ್ರ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮತ್ತು ಹಣ ಗಳಿಸಿರುವ ಸ್ವಯಂಘೋಷಿತ ಪ್ರಸಿದ್ಧ ತಾರೆಗಳೆನಿಸಿಕೊಂಡವರು ತಮ್ಮ ವರ್ಗಹಿತಾಸಕ್ತಿಯನ್ನು ನಾಚಿಕೆಯಿಲ್ಲದೆ ರಕ್ಷಿಸಿಕೊಳ್ಳಲು ಹೊರಟಿರುವುದು ಖಂಡನೀಯ. ಇವರಿಗೆ ಸಂವಿಧಾನ ನಿಷ್ಟೆಗಿಂತ ಹೆಚ್ಚಾಗಿ ವರ್ಗನಿಷ್ಟೆಯನ್ನು ಪ್ರದರ್ಶಿಸುವುದು ಇಂದು ಮುಖ್ಯವೆನಿಸಿರುವುದನ್ನು ಪ್ರಜ್ಞಾವಂತರು ಎತ್ತಿಹಿಡಿದಿದ್ದಾರೆ.

ಗಾಂಧಿ

ಇತ್ತೀಚೆಗೆ ಹಿರಿಯ ಗಾಂಧಿವಾದಿ ಅಣ್ಣಾಹಜಾರೆ ರೈತ ಚಳುವಳಿಗೆ ಬೆಂಬಲ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದು ಅವರ ಆರ್‌ಎಸ್‌ಎಸ್ ನಿಷ್ಟೆಯ ಪ್ರತೀಕವಾಗಿದೆ. ಆದಾಗ್ಯೂ, ಮಹಾತ್ಮ ಗಾಂಧಿಯವರ ಮೊಮ್ಮಗಳಾದ ತಾರಾಗಾಂಧಿ ಆಂದೋಲನ ನಿರತ ರೈತರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿರುವುದು ಆಶಾದಾಯಕ ಸಂಗತಿಯಾಗಿದೆ. ಅವರು ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕೆಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಿದ್ದಾರೆ. ಅನೇಕ ಪ್ರಗತಿಪರ ಚಿಂತಕರು ಮತ್ತು ಸಂಘಟನೆಗಳು ದೇಶಾದ್ಯಂತ ಆಂದೋಲನ ನಡೆಸುತ್ತಿರುವ ರೈತರನ್ನು ಬಲವಾಗಿ ಬೆಂಬಲಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಹೊಣೆಗಾರಿಕೆಗಳ ಆಧಾರದ ಮೇಲೆ ದೇಶದ ರೈತ ಸಮುದಾಯವನ್ನು ರಕ್ಷಿಸುವುದು ಪ್ರಜ್ಞಾವಂತ ಭಾರತೀಯರ ಪರಮಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ನೂತನ ಸಹಸ್ರಮಾನದಲ್ಲಿ ಆರ್ಥಿಕ ಸ್ವಾತಂತ್ರ್ಯ ಮತ್ತು ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ.

  • ಡಾ.ಬಿ.ಪಿ ಮಹೇಶ ಚಂದ್ರಗುರು

(ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು.)


ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...