Homeಅಂತರಾಷ್ಟ್ರೀಯಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಮ್ಮ ಆದ್ಯತೆ "ನ್ಯಾಯ ಮತ್ತು ಉದ್ಯೋಗಗಳು" ಎಂದು ಪ್ರಧಾನಿಯಾಗಲಿರುವ ಅಲ್ಬಿನ್ ಕುರ್ತಿ ಹೇಳಿದ್ದಾರೆ.

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ, ಆರ್ಥಿಕ ಹಿಂಜರಿತ ಮತ್ತು ಸೆರ್ಬಿಯಾದೊಂದಿಗೆ ಮಾತುಕತೆಗಳನ್ನು ಸ್ಥಗಿತಗೊಳಿಸಿದ ನಡುವೆ ನಡೆದ ಆರಂಭಿಕ ಚುನಾವಣೆಯಲ್ಲಿ ಕೊಸೊವೊದ ಎಡ ಪಕ್ಷ ವೆಟೆವೆಂಡೋಸ್ಜೆ ಸ್ಪಷ್ಟ ಗೆಲುವು ಸಾಧಿಸಿದೆ. ಪಕ್ಷದ ಮುಖಂಡ ಅಲ್ಬಿನ್ ಕುರ್ತಿ ಪ್ರಧಾನಿಯಾಗಲಿದ್ದಾರೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸೋಮವಾರ 98% ಮತ ಎಣಿಕೆ ಮುಗಿದಿದ್ದು, ಎಡಪಂಥೀಯ ನಿರ್ಣಯ ಚಳವಳಿ ಪಕ್ಷ ಎಂದು ಕರೆಯಲ್ಪಡುವ ವೆಟೆವೆಂಡೋಸ್ಜೆ 48% ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಕೊಸೊವೊದ ಸೆಂಟರ್-ರೈಟ್ ಡೆಮಾಕ್ರಟಿಕ್ ಪಾರ್ಟಿ ಅಥವಾ ಪಿಡಿಕೆ ಮತ್ತು ಕನ್ಸರ್ವೇಟಿವ್ ಆಡಳಿತದ ಕೊಸೊವೊದ ಡೆಮಾಕ್ರಟಿಕ್ ಲೀಗ್ ಅಥವಾ ಎಲ್ಡಿಕೆ ಎರಡೂ ಪಕ್ಷಗಳು ಸೋಲು ಅನುಭವಿಸಿವೆ.

ವೆಟೆವೆಂಡೋಸ್ಜೆ ಪಕ್ಷದ ಪ್ರಧಾನ ಮಂತ್ರಿಯಾಗುವ ನಿರೀಕ್ಷೆಯಿರುವ ನಾಯಕ ಅಲ್ಬಿನ್ ಕುರ್ತಿ ಮುಂದೆ “ದೇಶದ ಆರ್ಥಿಕತೆಯನ್ನು ಮೇಲೆತ್ತುವ, ಸಾಂಕ್ರಾಮಿಕ ರೋಗವನ್ನು ಎದುರಿಸುವ, ನಿರುದ್ಯೋಗವನ್ನು ಕಡಿಮೆ ಮಾಡುವ ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸವಾಲು ಇದೆ” ಎಂದು ಅಲ್‌ಜಜೀರಾ ವರದಿ ಮಾಡಿದೆ.

“ರಾಜ್ಯದ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನ್ಯಾಯ ಮತ್ತು ಉದ್ಯೋಗಗಳಿಗಾಗಿ ನಾವು ಈ ಜನಾಭಿಪ್ರಾಯವನ್ನು ಗೆದ್ದಿದ್ದೇವೆ” ಎಂದು ಅಲ್ಬಿನ್ ಕುರ್ತಿ ಹೇಳಿದ್ದಾರೆ. “ನಮ್ಮ ಆದ್ಯತೆ ನ್ಯಾಯ ಮತ್ತು ಉದ್ಯೋಗಗಳು” ಎಂದು ಅವರು ಸಾರಿದ್ದಾರೆ.

ಕೊಸೊವೊದಾ 120 ಸ್ಥಾನಗಳ ಸಂಸತ್ತಿನಲ್ಲಿ ಅಲ್ಬಿನ್ ಕುರ್ತಿಗೆ ಅಗತ್ಯವಾದ 61 ಸ್ಥಾನಗಳು ದಕ್ಕಿಲ್ಲ. ಆದರೆ ಸೋತ ಮುಖ್ಯ ವಿರೋಧ ಪಕ್ಷಗಳೊಂದಿಗೆ ಯಾವುದೇ ಮೈತ್ರಿ ಇರುವುದಿಲ್ಲ, ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೊಸೊವೊ ದೇಶವು 2008 ರಲ್ಲಿ ಸೆರ್ಬಿಯಾದಿಂದ ಸ್ವಾತಂತ್ರ್ಯವನ್ನು ಘೋಷಿಸಿಕೊಂಡಿತು. ಹೆಚ್ಚಿನ ಪಾಶ್ಚಿಮಾತ್ಯ ರಾಷ್ಟ್ರಗಳು ಕೊಸೊವೊವನ್ನು ರಾಷ್ಟ್ರವೆಂದು ಒಪ್ಪಿಕೊಂಡಿವೆ. ಆದರೆ ಸೆರ್ಬಿಯಾ ಮತ್ತು ಅದರ ಮಿತ್ರ ರಾಷ್ಟ್ರಗಳಾದ ರಷ್ಯಾ ಮತ್ತು ಚೀನಾ ಇದನ್ನು ಒಪ್ಪುವುದಿಲ್ಲ.


ಇದನ್ನೂ ಓದಿ: ಜಗತ್ತಿನ ಎಲ್ಲ ಹೋರಾಟಗಳನ್ನು ಬೆಸೆಯುವ ಡಿಜಿಟಲ್ ಆಕ್ಟಿವಿಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...