Homeಮುಖಪುಟಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಶಾಸಕ ಎ. ಜಾನ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ವಿ.ಪಿ. ಶಿವಕೋಲುಂಟು ಅವರಿಗೆ ಸಲ್ಲಿಸುವುದರೊಂದಿಗೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡಿದೆ. ಈ ಹಿಂದೆಯೆ ಆಡಳಿತ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದರು. ಅಲ್ಲಿ ಚುನಾವಣೆಗೆ ಇನ್ನೇನು ಕೆಲವೆ ತಿಂಗಳುಗಳು ಉಳಿದಿರುವಾಗ ಈ ರಾಜಕೀಯ ಬೆಳವಣಿಗೆ ಭಾರಿ ಅಚ್ಚರಿ ಮೂಡಿಸಿದೆ.

ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.

ಇದನ್ನೂ ಓದಿ: ಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

ಕಾಂಗ್ರೆಸ್‌ ತನ್ನ 10 ಶಾಸಕರು, ಮೂವರು ಡಿಎಂಕೆ ಶಾಸಕರು ಮತ್ತು ಆಡಳಿತಾರೂಢ ಒಕ್ಕೂಟವನ್ನು ಬೆಂಬಲಿಸುವ ಒಬ್ಬ ಪಕ್ಷೇತರ ಶಾಸಕನನ್ನು ಹೊಂದಿದೆ. ಪ್ರತಿಪಕ್ಷದಲ್ಲಿ ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರು, ಎನ್‌ಆರ್ ಕಾಂಗ್ರೆಸ್‌ನ ಏಳು ಶಾಸಕರು ಮತ್ತು ಎಐಎಡಿಎಂಕೆ ನಾಲ್ವರು ಶಾಸಕರಿದ್ದಾರೆ. ಮುಖ್ಯಮಂತ್ರಿ ನಾರಾಯಣಸಾಮಿ ಅವರ ಸರ್ಕಾರಕ್ಕೆ ಬಹುಮತವಿಲ್ಲ ಎಂದು ಆರೋಪಿಸಿರುವ ಪ್ರತಿಪಕ್ಷಗಳು ವಿಶ್ವಾಸ ಮತ ಯಾಚನೆಗೆ ಒತ್ತಾಯಿಸಿವೆ.

ನವದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಇತ್ತೀಚೆಗೆ ನಡೆದ ಸಭೆಗಳ ನಂತರ ಜಾನ್ ಕುಮಾರ್ ಆಡಳಿತ ಒಕ್ಕೂಟವನ್ನು ತೊರೆಯುವ ಬಗ್ಗೆ ಊಹಾಪೋಹಗಳು ಹಬ್ಬಿದ್ದವು.

ಇದನ್ನೂ ಓದಿ: ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ಶಾಸಕ ಎ. ಜಾನ್ ಕುಮಾರ್ ಅವರನ್ನು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರ ಆಪ್ತ ವಲಯದವರು ಎಂದು ಪರಿಗಣಿಸಲಾಗಿತ್ತು. ಅವರು ನೆಲ್ಲಿಥೋಪ್ ಕ್ಷೇತ್ರದಿಂದ 2016 ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದರು. ನಂತರ ಈ ಕ್ಷೇತ್ರವನ್ನು ನಾರಾಯಣಸಾಮಿ ಅವರಿಗೆ ಬಿಟ್ಟುಕೊಟ್ಟು 2019 ರಲ್ಲಿ ಕಾಮರಾಜ್ ನಗರ ಉಪಚುನಾವಣೆಯಲ್ಲಿ ಗೆದ್ದಿದ್ದರು.

ಇವರ ರಾಜೀನಾಮೆಗೂ ಮುಂಚೆ ಸರ್ಕಾರದ ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣ ರಾವ್‌ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಾಗಿ ಒಂದೇ ದಿನದಲ್ಲಿ ಜಾನ್ ಕುಮಾರ್ ಅವರ ರಾಜೀನಾಮೆ ನೀಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪುದುಚೇರಿಗೆ ಭೇಟಿ ನೀಡುವ ಒಂದು ದಿನ ಮುಂಚಿತವಾಗಿ ಇದು ನಡೆದಿದ್ದು, ರಾಜೀನಾಮೆಗಳು ರಾಜಕೀಯ ತಲ್ಲಣಗಳನ್ನು ಉಂಟು ಮಾಡಿದೆ. ರಾಹುಲ್ ಗಾಂಧಿಯವರ ಈ ಭೇಟಿಯು ಪುದುಚೇರಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಮಾಡುತ್ತಿರುವ ಮೊದಲನೇ ಭೇಟಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...