Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...