Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...