Homeಚಳವಳಿ'ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?

- Advertisement -
- Advertisement -

83 ದಿನಗಳು ತುಂಬಿದ ರೈತ ಹೋರಾಟ ಹಲವಾರು ರೀತಿಯ ಸೇವೆಗಳಿಂದ ಹೆಸರುವಾಸಿಯಾಗುತ್ತಿದೆ. ಸೇವೆಯನ್ನು ಹೀಗೂ ಮಾಡಬಹುದು ಎಂಬುದನ್ನು ಈ ಐತಿಹಾಸಿಕ ಹೋರಾಟದಲ್ಲಿ ಸಿಖ್ ಸಮುದಾಯ ಜಗತ್ತಿಗೆ ತಿಳಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ಬೂಟಾ ಸಿಂಗ್ ಐರನ್ (ಇಸ್ತ್ರಿ) ಸೇವೆ ನೀಡುತ್ತಿದ್ದಾರೆ.

ಬೂಟಾ ಸಿಂಗ್ ತರನ್ ತಾರನ್ ಸಾಹಿಬ್ (Tarn Taran Sahib) ಜಿಲ್ಲೆಯವರು. ಅವರು ಮೂಲತಃ ಕೃಷಿಕರಾಗಿದ್ದು, ಸದ್ಯ ಸಿಂಘು ಗಡಿಯಲ್ಲಿ ಐರನ್ ಅಂಗಡಿ ಇಟ್ಟು ಪ್ರತಿಭಟನಾ ನಿರತರ ಬಟ್ಟೆಗಳನ್ನು ಐರನ್ ಮಾಡುವ ಸೇವೆ ಮಾಡುತ್ತಿದ್ದಾರೆ.

“ಈ ಹಿಂದೆ ಸರ್ಕಾರದ ವಿರುದ್ಧ, ಕೆಟ್ಟ ಯೋಜನೆಗಳ ವಿರುದ್ಧ ನಿಂತಿದ್ದವರು, ವಿರೋಧಿಸಿದವರು ಬೇರೆ. ಅಂದಿನ ಪ್ರತಿಭಟನಾ ಸ್ವರೂಪವೂ ಬೇರೆ. ಆದರೆ ಈಗ ಪ್ರಧಾನಿ ಮೋದಿ ತಮ್ಮ ಕೆಟ್ಟ ಕಾನೂನುಗಳ ಮೂಲಕ ಎದುರು ಹಾಕಿಕೊಂಡಿರುವುದು ಅವರ ಅಳಿಯಂದಿರನು. ಅಳಿಯರ ಮುಂದೆ ಮಾವ ಗೆದ್ದ ಉದಾಹರಣೆ ಇಲ್ಲವೆ ಇಲ್ಲ” ಎಂದು ರೈತ ಬೂಟಾ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಭತ್ತ, ಜೋಳ, ಕಡಲೆ ಮತ್ತು ಕಬ್ಬು ಬೆಳೆಯುವ ಬೂಟಾ ಸಿಂಗ್, ಪ್ರತಿಭಟನಾ ಸ್ಥಳದಲ್ಲಿ ಒಂದೂವರೆ ತಿಂಗಳು ವಾಷಿಂಗ್ ಮಷಿನ್‌ಗಳನ್ನು ಇಟ್ಟು ರೈತರ ಬಟ್ಟೆ ಸ್ವಚ್ಛಗೊಳಿಸುತ್ತಿದ್ದರು. ದಿನೇ ದಿನೇ ವಾಷಿಂಗ್ ಮಷಿನ್‌ಗಳ ಸಂಖ್ಯೆ ಹೆಚ್ಚಾದ ಕಾರಣ ಮತ್ತು ತೀವ್ರ ಚಳಿ ಮತ್ತು ಮಂಜಿನಲ್ಲಿ ಬೇಗ ಬಟ್ಟೆ ಒಣಗದಿರುವುದನ್ನು ಗಮನಿಸಿ ಐರನ್ ಸೇವೆ ನೀಡುತ್ತಿದ್ದಾರೆ.

ಐರನ್ ಸೇವೆ ನೀಡಲು 20 ಜನರ ತಂಡ ಇಲ್ಲಿದೆ. 8 ಜನರ ಪಾಳಿಯಂತೆ ಇಡೀ ದಿನ ಬಟ್ಟೆಗಳ್ನು ಐರನ್ ಮಾಡಿ ಕೊಡಲಾಗುತ್ತದೆ. ವಾಷಿಂಗ್ ಮಷಿನ್ ಇಟ್ಟಿರುವ ಸ್ಥಳದ ಮುಂದೆಯೇ ಇವರು ತಮ್ಮ ಟ್ಯ್ರಾಲಿಯನ್ನು ಇಟ್ಟುಕೊಂಡಿದ್ದಾರೆ.

ಅಮನ್ ಸಿಂಗ್, ಜಸ್ಪಿಂದರ್ ಸಿಂಗ್, ಬಲದೇವ್ ಸಿಂಗ್, ಬಲ್ಜಿಂದರ್ ಸಿಂಗ್ ಮತ್ತು ಲಕ್ಕಿ ಸಿಂಗ್ ಸೇರಿದಂತೆ ೨೦ ಮಂದಿಯ ತಂಡ ಬೂಟಾ ಸಿಂಗ್ ಅವರ ನೇತೃತ್ವದಲ್ಲಿ ಐರನ್ ಸೇವೆ ನೀಡುತ್ತಿದೆ. ಬಿಸಿಲು ಮರೀಚಿಕೆಯಾಗಿದ್ದ ಸಮಯದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಈಗ ಪರಿಸ್ಥಿತಿ ಪರವಾಗಿಲ್ಲ. ಸ್ವಲ್ಪ ಬಿಸಿಲು ಇದೆ. ಚಳಿ ಮತ್ತು ಮಂಜಿನಲ್ಲಿ ಐರನ್ ಸೇವೆ ನಿಜಕ್ಕೂ ಅನಿವಾರ್ಯವಾಗಿತ್ತು ಎನ್ನುತ್ತಾರೆ ರೈತರು.

‘ನಮ್ಮನ್ನು ಖಾಲಿಸ್ತಾನಿಗಳು ಎಂದು ಕರೆಯುತ್ತಾರೆ. ನಮ್ಮ ಜಿಲ್ಲೆಯನ್ನು ಖಾಲಿಸ್ತಾನಿಗಳ ಜಿಲ್ಲೆ ಎನ್ನುತ್ತಾರೆ. ಹಾಗೆಂದು ನಾವು ನಮ್ಮವರು ತೊಂದರೆಯಲ್ಲಿದ್ದಾಗ ಅವರ ಸೇವೆ ಮಾಡದೇ ಇರಲು ಸಾಧ್ಯವೆ..? ನಮ್ಮ ಹಕ್ಕು ಕೇಳಿದರೆ ನಾವು ಖಾಲಿಸ್ತಾನಿಯರಾಗುತ್ತೇವೆ. ಅದೇ ನಾವು ದೇಶಕ್ಕಾಗಿ ಯುದ್ಧಗಳಲ್ಲಿ ಪ್ರಾಣ ಬಿಟ್ಟಾಗ ನಾವು ಖಾಲಿಸ್ತಾನಿಯರು ಎಂದು ಅನಿಸುವುದಿಲ್ಲವೆ..?’ ಎಂದು ಆಕ್ರೋಶ ಹೊರಹಾಕುತ್ತಾರೆ ರೈತ ಬೂಟಾ ಸಿಂಗ್.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೊರಾಟ ನಡೆಸುತ್ತಿರುವ ರೈತರು ವಿಭಿನ್ನ ಸೇವೆಗಳಿಂದ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ತಮ್ಮ ಊರುಗಳಲ್ಲಿ ತಾವು ಮಾಡುವ ಕೆಲಸ ಬೇರೆ. ಆದರೆ ಇಲ್ಲಿ ಇವರು ಸೇವೆ ಮಾಡಲು ಯಾವುದು ಅವಶ್ಯಕವಾಗಿದೆಯೋ ಅದನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸೇವೆಯಲ್ಲಿ ದೊಡ್ಡದು, ಚಿಕ್ಕದು ಎಂಬ ಭೇದವಿಲ್ಲದೆ ಇಲ್ಲಿ ಜನ ಕೆಲಸ ಮಾಡುತ್ತಾರೆ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...