Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...