Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...