Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...