Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...