Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...