Homeಚಳವಳಿರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ - ರೈತ ಮುಖಂಡರು

ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಇಂದಿನ (ಫೆ.16) ವಸಂತ ಪಂಚಮಿಯನ್ನು ‘ರೈತ ಹೋರಾಟಗಾರ ಸರ್ ಛೋಟು ರಾಮ್ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ದಿನವೆಂದು’ ಗುರುತಿಸಿ ಭಾರತದ ರೈತರಿಗೆ ಈ ದಿನವನ್ನು ಸಮರ್ಪಿಸಿದೆ. ವಿವಿಧ ರೈತ ಸಂಘಗಳ ಮುಖಂಡರು, ಸರ್ ಛೋಟು ರಾಮ್ ಅವರನ್ನು ಗೌರವಯುತವಾಗಿ ಸ್ಮರಿಸಿ ಅವರ ಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರೈತ ಮುಖಂಡರು, ಸರ್ ಛೋಟು ರಾಮ್ ಅವರು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಮತ್ತು ಅವರನ್ನು ಹೋರಾಟಕ್ಕೆ ಸಜ್ಜುಗೊಳಿಸಿದ ವಿಧಾನವನ್ನು ಶ್ಲಾಘಿಸಿದರು. ರೈತರ ಅನುಕೂಲಕ್ಕಾಗಿ ಬ್ರಿಟಿಷ್ ಆಡಳಿತಗಾರರಿಂದ ಕನಿಷ್ಠ 22 ಪ್ರಮುಖ ಶಾಸನಗಳನ್ನು ಜಾರಿಗೊಳಿಸುವಲ್ಲಿ ಅವರು ಸಫಲರಾದರು. ಇಂದಿಗೂ, ದೇಶದ ರೈತರು ಶೋಷಣೆಯ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ ಛೋಟು ರಾಮ್ ಉತ್ತಮ ಸ್ಫೂರ್ತಿಯ ಮೂಲವಾಗಿ ಉಳಿದಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಸರ್‌ ಛೋಟು ರಾಮ್‌, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಪಂಜಾಬ್‌ ಪ್ರಾಂತ್ಯವನ್ನು ಪ್ರತಿನಿಧಿಸುತ್ತಿದ್ದ ರೈತ ನಾಯಕ. ನ್ಯಾಷನಲ್‌ ಯೂನಿಯನಿಸ್ಟ್‌ ಪಕ್ಷವನ್ನು ಕಟ್ಟಿ, ಪಂಜಾಬ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅತ್ಯಂತ ಶಕ್ತಿಶಾಲಿ ನಾಯಕರಾಗಿ ಬೆಳೆದವರು. ವಕೀಲರಾಗಿ ವೃತ್ತಿ ಆರಂಭಿಸಿದ ಛೋಟು ರಾಮ್‌ 1916ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದರು. ರೋಹ್ಟಕ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆ ಮಾಡಿದ ಅವರು ರೈತ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಹಂಬಲದೊಂದಿಗೆ 1923ರಲ್ಲಿ ಯೂನಿಯನಿಸ್ಟ್‌ ಪಕ್ಷ ಕಟ್ಟಿದರು. ರೈತರ ಒಳಿತಿಗಾಗಿ ಸಂಘಟನೆಯನ್ನು ತೀವ್ರವಾಗಿಸಿದ ಪಂಜಾಬ್‌ನಲ್ಲಿ ಜಾರಿಗೆ ಬಂದ ಎರಡು ಕೃತಿ ಕಾನೂನುಗಳಿಗೆ ಇವರ ಕೊಡುಗೆ ಅಪಾರವಾದದ್ದು. ಅಷ್ಟೇ ಅಲ್ಲ, 1934 ಪಂಜಾಬ್‌ ಸಾಲ ಪರಿಹಾರ ಕಾಯ್ದೆ ಮತ್ತು ಪಂಜಾಬ್‌ ಸಾಲಗಾರರ ರಕ್ಷಣಾ ಕಾಯ್ದೆ 1936ರ ಜಾರಿಗೂ ಇವರು ಶ್ರಮಿಸಿದರು. ಈ ಕಾನೂನುಗಳು ರೈತರನ್ನು ಸಾಲಗಾರರ ಶೋಷಣೆಯಿಂದ ರಕ್ಷಿಸಿದವು. ಅಷ್ಟೇ ಅಲ್ಲ, ರೈತರ ಭೂಮಿಯನ್ನು ಉಳಿಸಿಕೊಟ್ಟವು. ಇದಲ್ಲದೆ ಎಪಿಎಂಸಿ ಕಾಯ್ದೆ, ಸಾಲ ಮನ್ನಾ ಅಧಿನಿಯಮಗಳ ಜಾರಿಗೂ ಛೋಟು ರಾಮ್‌ ಶ್ರಮಿಸಿ ರೈತರನ್ನು ವಿವಿಧ ರೀತಿಯ ಶೋಷಣೆಗಳಿಂದ ರಕ್ಷಿಸಿದರು.

ಮುಂದುವರಿದು, ಹರಿಯಾಣದ ಮಂತ್ರಿಗಳಾದ ಜೆಪಿ ದಲಾಲ್ ಮತ್ತು ಅನಿಲ್ ವಿಜ್ ಅವರಂತಹ ರೈತ ವಿರೋಧಿ ಮಂತ್ರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಹರಿಯಾಣ ರೈತ ಮುಖಂಡರು ಒತ್ತಾಯಿಸಿದರು. ಹರಿಯಾಣದ ಮಹಾಪಂಚಾಯತ್‌ಗಳು ಈ ನಿಟ್ಟಿನಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದು, ತಮ್ಮ ರೆಸಲ್ಯೂಶನ್ ಪ್ರತಿಗಳನ್ನು ಮುಖ್ಯಮಂತ್ರಿ ಮತ್ತು ಹರಿಯಾಣ ರಾಜ್ಯಪಾಲರಿಗೆ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಣದುಬ್ಬರವಾಗುತ್ತಿದ್ದಂತೆ ಕಬ್ಬಿನ ಬೆಲೆಗಳು ಸ್ಥಿರವಾಗಿ ಉಳಿದಿವೆ ಮತ್ತು ಕಬ್ಬು ಬೆಳೆಯುವ ರೈತರಿಗೆ ಉತ್ತರ ಪ್ರದೇಶದಲ್ಲೇ ಸುಮಾರು 12,000 ಕೋಟಿ ರೂಪಾಯಿ ಬಾಕಿ ಇರುವುದನ್ನು ತಿಳಿಸಿ ಉತ್ತರ ಪ್ರದೇಶದ ರೈತರು ಗಮನಸೆಳೆದಿದ್ದಾರೆ. ಇದರ ಜೊತೆಗೆ “ಯುಪಿ ಸರ್ಕಾರದ ರೈತ ವಿರೋಧಿ ನೀತಿಗಳು ಬಹಳ ಸ್ಪಷ್ಟವಾಗಿದ್ದು, ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇನ್ನು ಹೆಚ್ಚಿನ ರೈತರು ಸೇರುವ ನಿರೀಕ್ಷೆಯಿದೆ” ಎಂಬ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ಕಿಸಾನ್ ಮಹಾಪಂಚಾಯತ್ ಮತ್ತು ಜನಸಭೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಇತ್ತೀಚಿಗೆ ತೆಲಂಗಾಣದ ಖಮ್ಮಂನಲ್ಲಿ ಮಹಾಪಂಚಾಯತ್ ನಡೆದಿದ್ದು, ಅಲ್ಲಿ ಹತ್ತಾರು ಸಾವಿರ ರೈತರು ಭಾಗವಹಿಸಿದ್ದಾರೆ ಎಂದು ತಿಳಿಸಲಾಗಿದೆ. ರ್ಯಾಲಿ ಮತ್ತು ಸಾರ್ವಜನಿಕ ಸಭೆಯನ್ನು ಎಐಕೆಎಂಎಸ್ ಆಯೋಜಿಸಿತ್ತು.

ರೈತರ ಆಂದೋಲನವನ್ನು ಬೆಂಬಲಿಸಿ ವಾರ್ಧಾದಲ್ಲಿ ಪ್ರಾರಂಭವಾದ ಪಕ್ಕಾ ಮೋರ್ಚಾ ಈಗ 65 ನೇ ದಿನಕ್ಕೆ ಕಾಲಿಟ್ಟಿದ್ದು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಅನೇಕ ವರ್ಗಗಳು ಈ ಮೋರ್ಚಾದ ಭಾಗವಾಗಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಮೇಲಿನ ಆಕ್ರೋಶದಿಂದ ಇತರ ಜನರು ಕಾನೂನುಗಳನ್ನು ಉಲ್ಲಂಘಿಸುತ್ತಾರೆ. ಆದರೆ ರೈತರಿಗೇನಾದರೂ ಆಕ್ರೋಶವುಂಟಾದರೆ ಅವರು ಕೇವಲ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ಸರ್ಕಾರದ ಬುಡವನ್ನೇ ಮುರಿಯುತ್ತಾರೆ. – ಸರ್ ಛೋಟು ರಾಮ್


ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...