Homeಕರೋನಾ ತಲ್ಲಣಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ

- Advertisement -
- Advertisement -

ಕೊರೊನಾ ಸೋಂಕಿನ ಪ್ರಕರಣಗಳು ಸಾಪೇಕ್ಷವಾಗಿ ಕಡಿಮೆಯಾದ ಕಾರಣ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳಿಗೆ ವಿದಾಯ ಹೇಳುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ದಿಢೀರನೆ ಅಪಾರ್ಟ್‌ಮೆಂಟ್ ಒಂದರಲ್ಲಿ 103 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಅಲ್ಲೀಗ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.

ರಾಜ್ಯ  ರಾಜಧಾನಿ ಬೆಂಗಳೂರಿನಲ್ಲಿರುವ ಅಪಾಟ್ಮೆಂಟ್ ಸಂಕೀರ್ಣ ಒಂದರ 103 ನಿವಾಸಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ನಂತರ ಇಡೀ ಅಪಾರ್ಟ್‌ಮೆಂಟ್ ಅನ್ನು ಕಂಟೇನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಿಲ್ಲಾ ಅಧಿಕಾರಿಗಳ ತಂಡದ ಪ್ರಕಾರ, ವಸತಿ ನಿಲಯದಲ್ಲಿ ಎರಡು ವಿವಾಹ ವಾರ್ಷಿಕೋತ್ಸವದ ಪಾರ್ಟಿಗಳನ್ನು ಆಯೋಜಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವು ದಾಖಲಾಗಿದೆ. ದಕ್ಷಿಣ ಬೆಂಗಳೂರಿನ ಬಿಳಕೆಹಳ್ಳಿ ಪ್ರದೇಶದ ಎಸ್‌ಎನ್‌ಎನ್ ರಾಜ್ ಲೇಕ್‌ವ್ಯೂ ಅಪಾರ್ಟ್‌ಮೆಂಟ್ ಈಗ  ಹೊಸ  ಕೊರೊನಾ ವೈರಸ್ ಕ್ಲಸ್ಟರ್ ಆಗಿ ಹೊರಹೊಮ್ಮಿದೆ. ಜಿಲ್ಲಾಡಳಿತವು ಅಪಾಟ್ಮೆಂಟ್ ಸಂಕೀರ್ಣದಲ್ಲಿ ಕಳೆದ ವಾರದಿಂದ ಸಾಮೂಹಿಕ ಕೊರೊನಾ ಪರೀಕ್ಷೆಗೆ ಚಾಲನೆ ನೀಡಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

“ನಾವು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡಿದ್ದೇವೆ – ಫೆಬ್ರವರಿ 11 ರಂದು 7 ಪ್ರಕರಣಗಳು, ಫೆಬ್ರವರಿ 12 ರಂದು 17 ಪ್ರಕರಣಗಳು ವರದಿಯಾಗಿವೆ. ಫೆಬ್ರವರಿ 13 ರಂದು ಬಿಬಿಎಂಪಿ ಹೆಚ್ಚಿನ ತನಿಖೆಗಾಗಿ ಅಪಾರ್ಟ್‌ಮೆಂಟ್‌ಗೆ  ಧಾವಿಸಿ,  ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿದೆವು. 399 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. 1,190 ಜನರನ್ನು ಪರೀಕ್ಷಿಸಲಾಯಿತು, ಅದರಲ್ಲಿ 103 ಮಂದಿಗೆ ಸೋಂಕು ಧೃಡಪಟ್ಟಿದೆ. 103 ರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ “ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿನ ವರದಿ ಮಾಡಿದೆ.

“ಫೆಬ್ರವರಿ 6 ಮತ್ತು 7 ರಂದು ಎರಡು ವಾರ್ಷಿಕೋತ್ಸವದ ಪಾರ್ಟಿಗಳು ನಡೆದಿವೆ ಎಂದು ನಮಗೆ ಮಾಹಿತಿ ದೊರೆತಿದೆ” ಎಂದು ಅವರು ಹೇಳಿದರು.

ಪಾಸಿಟಿವ್ ಕಂಡುಬಂದವರಲ್ಲಿ  ಹೆಚ್ಚಿನವರು 50 ಕ್ಕಿಂತ ಕಡಿಮೆ ವಯಸ್ಸಿನವರು ಮತ್ತು ರೋಗಲಕ್ಷಣವಿಲ್ಲದವರು ಎಂದು ಪ್ರದೇಶದ ತನಿಖೆ ನಡೆಸುತ್ತಿರುವ ವೈದ್ಯಕೀಯ ಅಧಿಕಾರಿ ಡಾ.ಕೃಷ್ಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್ ಪಾಲಿಸಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಬೊಮನಹಳ್ಳಿ ರಾಮಕೃಷ್ಣ ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿದಿನ ಒಂದು ಲಕ್ಷ ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಭಾರತ, ಕಳೆದ ಕೆಲವು ದಿನಗಳಿಂದ 10,000 ಪ್ರಕರಣಗಳನ್ನು ದಾಖಲಿಸುತ್ತಿದೆ. ಅಮೆರಿಕ ನಂತರ ಎರಡನೇ ಅತಿ ಹೆಚ್ಚು ಹಾನಿಗೊಳಗಾದ ದೇಶದಲ್ಲಿ ಇತ್ತೀಚೆಗೆ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರವು ಕಳೆದ ತಿಂಗಳು ಘೋಷಿಸಿತ್ತು.

ಆದರೂ, ವಿದೇಶದಲ್ಲಿ ಕೊರೊನಾ ರೂಪಾಂತರಿತ ತಳಿಗಳು ಕಂಡು ಬಂದ ಕಾರಣ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮ  ಕೈಬಿಡದಂತೆ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಕರ್ನಾಟಕವು ಪ್ರಸ್ತುತ ಮಹಾರಾಷ್ಟ್ರ ಮತ್ತು ಕೇರಳದ ನಂತರದ ಮೂರನೇ ಅತಿ ಹೆಚ್ಚು ಕೊರೊನಾ ಬಾಧಿತ ರಾಜ್ಯವಾಗಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...