Homeಅಂತರಾಷ್ಟ್ರೀಯ'ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ' ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

- Advertisement -
- Advertisement -

ಬಿಜೆಪಿಯನ್ನು ನೆರೆಯ ರಾಷ್ಟ್ರಗಳಾದ ನೇಪಾಳ ಮತ್ತು ಶ್ರೀಲಂಕಾದಲ್ಲೂ ಸಂಘಟಿಸುವ ಯೋಜನೆಯಿದೆ ಎಂದಿರುವ ಅಮಿತ್ ಶಾ ಹೇಳಿಕೆಯ ವಿರುದ್ಧ ನೇಪಾಳವು ಕಳವಳ ವ್ಯಕ್ತಪಡಿಸಿದೆ.

‘ಕಠ್ಮಂಡು ಪೋಸ್ಟ್’ ಪ್ರಕಾರ, “ಭಾರತದ ನೇಪಾಳಿ ರಾಯಭಾರಿ ನಿಲಾಂಬರ್ ಆಚಾರ್ಯ ಅವರು ಭಾರತದ ವಿದೇಶಾಂಗ ಸಚಿವಾಲಯದ ನೇಪಾಳ ಮತ್ತು ಭೂತಾನ್‌ನ ಜಂಟಿ ಕಾರ್ಯದರ್ಶಿ ಅರಿಂದಮ್ ಬಾಗ್‌ಚಿಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇವ್ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ವಿವಿಧ ಸುದ್ದಿ ಮಾಧ್ಯಮಗಳು ವರದಿ ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ. ಇದಕ್ಕೆ ಸಂಬಂಧಿಸಿದಂತೆ ಗುರುವಾರದ ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭರವಸೆ ನೀಡಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಗರ್ತಲಾದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ, “ಪಕ್ಷವನ್ನು ದೇಶಾದ್ಯಂತ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳಲ್ಲೂ ವಿಸ್ತರಿಸುವ ಯೋಜನೆ ಇದೆ. ಗೃಹ ಸಚಿವ ಅಮಿತ್ ಶಾ ಅವರು ನೇಪಾಳ ಮತ್ತು ಶ್ರೀಲಂಕಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸುವ ಯೋಜನೆ ಹೊಂದಿದ್ದಾರೆ” ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

“2018ರಲ್ಲಿ ತ್ರಿಪುರಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು, ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬಂದ ಬಳಿಕ ವಿದೇಶಗಳಲ್ಲೂ ಪಕ್ಷವನ್ನು ವಿಸ್ತರಿಸುವ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದರು” ಎಂದು ಬಿಪ್ಲವ್ ದೇವ್ ಹೇಳಿದ್ದರು.

ಈ ಹೇಳಿಕೆಯ ವಿರುದ್ಧ ದೇಶದಾದ್ಯಂತ ಖಂಡನೆ ವ್ಯಕ್ತವಾಗಿತ್ತು.

ಇನ್ನು ಈ ಕುರಿತು ಶ್ರೀಲಂಕಾ ಕೂಡ ಪ್ರತಿಕ್ರಿಯಿಸಿದ್ದು, ಶ್ರೀಲಂಕಾ ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಪುಂಚಿಹೆವಾ ಸೋಮವಾರ, “ದೇಶದ ಚುನಾವಣಾ ಕಾನೂನು ಹೊರಗಿನ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವುದಿಲ್ಲ. ಶ್ರೀಲಂಕಾದ ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯು ವಿದೇಶದಲ್ಲಿರುವ ಯಾವುದೇ ಪಕ್ಷ ಅಥವಾ ಸಂಘಟನೆಯೊಂದಿಗೆ ಬಾಹ್ಯ ಸಂಪರ್ಕ ಹೊಂದಬಹುದು. ಆದರೆ, ಸಾಗರೋತ್ತರ ರಾಜಕೀಯ ಪಕ್ಷಗಳು ನಮ್ಮ ನೆಲದಲ್ಲಿ ಕಾರ್ಯನಿರ್ವಹಿಸಲು ನಮ್ಮ ಚುನಾವಣಾ ಕಾನೂನುಗಳು ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.


ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಮತ್ತೊಬ್ಬ ಆರೋಪಿ ಶಾಂತನು ಮುಲುಕ್‌ಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...