Homeಮುಖಪುಟದಿಶಾ ರವಿ ಬಂಧನ ಖಂಡಿಸಿದ 'ಭಾರತದ ಗ್ರೇಟಾ ಥನ್‌ಬರ್ಗ್' ರಿಧಿಮಾ ಪಾಂಡೆ

ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

13 ವರ್ಷದ ಈಕೆ ಬಿಬಿಸಿಯ 2020 ರ ಜಗತ್ತಿನ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

- Advertisement -
- Advertisement -

ದಿಶಾ ರವಿಯ ಬಂಧನಕ್ಕೆ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಖಂಡನೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ‘ಭಾರತದ ಗ್ರೆಟಾ ಥನ್‌ಬರ್ಗ್’ ಎಂದು ಕರೆಯಲ್ಪಡುವ ಯುವ ಹವಾಮಾನ ಕಾರ್ಯಕರ್ತೆ ರಿಧಿಮಾ ಪಾಂಡೆ (13), ದಿಶಾ ರವಿಯ ಬಂಧನವನ್ನು ಅನಗತ್ಯ ಎಂದು ಕರೆದಿದ್ದಾರೆ.

“ದಿಶಾ ಅವರು ಪರಿಸರ ಮತ್ತು ಪರಿಸರ ವಿಜ್ಞಾನಕ್ಕಾಗಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ. ಆಕೆ ರಾಷ್ಟ್ರ ವಿರೋಧಿ ಆಗಲು ಸಾಧ್ಯವಿಲ್ಲ. ಇದಕ್ಕೆ ತದ್ವಿರುದ್ಧವಾಗಿ ಅವರು ದೇಶದ ಬಲವರ್ಧನೆಗೆ ಕೊಡುಗೆ ನೀಡಲು ಯುವಜನತೆಯನ್ನು ಪ್ರೇರೇಪಿಸುತ್ತಿದ್ದಾರೆ” ಎಂದು ಸರ್ಕಾರದ ಧೋರಣೆಯನ್ನು ಖಂಡಿಸಿರುವ ರಿಧೀಮಾ ಪಾಂಡೆ ದಿಶಾ ರವಿಗೆ ಬೆಂಬಲ ಸೂಚಿಸಿದ್ದಾರೆ.

ರೈತರ ಪ್ರತಿಭಟನೆ ಮತ್ತು ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆಗೆ ಸಂಬಂಧಿಸಿದ ‘ಟೂಲ್‌ಕಿಟ್’ ಅನ್ನು ಹಂಚಿಕೊಂಡಿದ್ದಕ್ಕಾಗಿ ಯುವ ಪರಿಸರ ಹೋರಾಟಗಾರ್ತಿ ದಿಶಾಳನ್ನು ಬಂಧಿಸಲಾಗಿದೆ.

ರಿಧಿಮಾ ಪಾಂಡೆ ಬಿಬಿಸಿಯ 2020 ರ ಜಗತ್ತಿನ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಬಿಬಿಸಿಯು ರಿಧಿಮಾಳನ್ನು “ಹವಾಮಾನ ಕಾರ್ಯಕರ್ತೆ” ಎಂದು ಬಣ್ಣಿಸಿತ್ತು. ಆಕೆ ತನ್ನ ಒಂಬತ್ತನೇ ವಯಸ್ಸಿನಲ್ಲಿಯೇ, ಹವಾಮಾನ ಬದಲಾವಣೆಯನ್ನು ತಗ್ಗಿಸುವಲ್ಲಿನ ನಿಷ್ಕ್ರಿಯತೆಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಪ್ರಪಂಚವನ್ನು ಪೀಡಿಸುತ್ತಿರುವ ಪರಿಸರದ ಸಮಸ್ಯೆಗಳ ಕುರಿತು ವಿಶ್ವಸಂಸ್ಥೆಗೆ ಮನವಿ ಸಲ್ಲಿಸಿರುವ ಜಗತ್ತಿನಾದ್ಯಂತ ಇರುವ 16 ಮಕ್ಕಳಲ್ಲಿ ರಿಧಿಮಾ ಪಾಂಡೆ ಕೂಡಾ ಒಬ್ಬರು.

ಡೆಹ್ರಾಡೂನ್ ವಿಮಾನ ನಿಲ್ದಾಣವನ್ನು ವಿಸ್ತರಿಸಲು 10,000 ಕ್ಕೂ ಹೆಚ್ಚು ಮರಗಳನ್ನು ಕಡಿಯುವ ಉತ್ತರಾಖಂಡ ಸರ್ಕಾರದ ಕ್ರಮವನ್ನು ವಿರೋಧಿಸಿರುವ ರಿಧಿಮಾ ಪಾಂಡೆ, ಸೇವ್ ಥಾನೋ ಫಾರೆಸ್ಟ್ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.


ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...