Homeಕರ್ನಾಟಕನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ದಶಕಗಳ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಕೆಲಸ ಬಿರುಸಾಗಿ ನಡೆಯುತ್ತಿದ್ದು, ಇದಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಆದರೆ ಈ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳುತ್ತಿದ್ದು, ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹಿಸಿದ ಹಣ ಮತ್ತು ಇಟ್ಟಿಗೆಯ ಲೆಕ್ಕ ಏನಾಯ್ತು? ಎಂದು ಹಿಂದೂ ಸಂಘಟನೆಗಳು ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದು, “ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಹಾಕಿಕೊಳ್ಳಲಾಗುತ್ತಿದೆಯಂತೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಯೋಧ್ಯೆಯಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ, ನಮ್ಮೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುತ್ತೇನೆ. ಇವರು ಸಂಗ್ರಹಿಸುವ ಹಣಕ್ಕೆ ರಸೀದಿ ಕೊಡುತ್ತಾರೆಯೇ? ಲೆಕ್ಕ ಕೊಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಒಳಗಾಗಿತ್ತು.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಸಂದೇಹವಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಚಿಂತಕರಾದ ನಾ ದಿವಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, “ಸ್ವಾಮೀಜಿಯವರ ಮನುಜ ನಿಷ್ಠೆಯ ಬಗ್ಗೆ ಸಂದೇಹ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ವಿನೋದ್ ಎಂಬುವವರು, “ದೇಶನಿಷ್ಠೆಯ ಮಾನದಂಡವೇನು? ಸಿದ್ಧರಾಮಯ್ಯ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದಿದ್ದಾರೆ ಪೇಜಾವರ ಶ್ರೀ! ಹಾಗೆಂದರೇನು? ದೇಶನಿಷ್ಠೆಗೆ ಇರುವ ಮಾನದಂಡವೇನು? ನಮಗೆ ಶಾಲೆ-ಕಾಲೇಜು ಎಲ್ಲಿಯೂ ದೇಶನಿಷ್ಠೆ ಬಗ್ಗೆ ಕಲಿಸಲಿಲ್ಲ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಲಿಸಿದರಷ್ಟೇ. ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಾಜಿ ಸಿಎಂ ಅವರು ಅಗೌರವ ತೋರಿರುವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಉಡುಪಿಯ ಪೇಜಾವರ ಸ್ವಾಮಿಗೆ ಮನುವಾದದ ಪಿತ್ತ ನೆತ್ತಿಗೇರಿದೆ… ಶೂದ್ರಶಕ್ತಿಯಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ಮನುವಾದಿಗಳಿಗೆ ದೇಶದ್ರೋಹಿಯಂತೆ ಕಾಣದೆ ಮತ್ತೆ ಹೇಗೆ ಕಂಡಾರು? ಮನುವಿನ ಸಂವಿಧಾನ ಈಗ ದೇಶಭಕ್ತಿಯ ಕವಚ ತೊಟ್ಟು ಜಾರಿಯಾಗುತ್ತಿದೆ.. ಎಂದು ಯತಿರಾಜ್ ಬ್ಯಾಲಹಳ್ಳಿ ಕಿಡಿಕಾರಿದ್ದಾರೆ.

ವಿಶ್ವ ಪೂಜಾರ ಎಂಬುವವರು ಸ್ವಾಮೀಜಿಯ ಹೇಳಿಕೆಯನ್ನು ಉಲ್ಲೇಖಿಸಿ, “ಹಿರಿಯ ಸ್ವಾಮಿಗಳ ( ದಿ. ವಿಶ್ವೇಶ್ವರ ತೀರ್ಥ ಸ್ವಾಮೀಜಿ) ಹಾದಿಯಲ್ಲಿಯೇ ಸಾಗುತ್ತಿರುವ ಕಿರಿಯ ಸ್ವಾಮಿಗಳು. ನಮ್ಮ ಹೆಮ್ಮೆ” ಎಂದು ಪೇಜಾವರ ಶ್ರೀಗಳ ಕಾಲೆಳೆದಿದ್ದಾರೆ.

ಎಂ ಆರ್ ಕೃಷ್ಣ ಎಂಬುವವರು ತಮ್ಮ ಪೋಸ್ಟ್‌ನಲ್ಲಿ, “ಇವರಿಗೆಲ್ಲಾ ಮಠಾಧಿಪತಿ ಅಂತ ಎಲ್ಲರೂ ಮರ್ಯಾದೆ ಕೊಡುತ್ತಾರೆ, ಆದರೆ ನಾಲಿಗೆ ಹರಿಬಿಡುವ ಇಂತಹವರು ಟೆಂಪಲ್ ಇಂಡಸ್ಟ್ರಿ ನಡೆಸುತ್ತಿದ್ದು ಟನ್‌ಗಟ್ಟಲೆ ಹಣ ಸಂಗ್ರಹಿಸುತ್ತಾರೆ, ಜನರಿಂದ, ರಾಜಕಾರಣಿಗಳಿಂದ, ಉದ್ಯಮಿಗಳಿಂದ ಮತ್ತು ಸರ್ಕಾರದಿಂದ ಕೂಡಾ. ಮಠಗಳು ರಾಜಕೀಯ ಮಾಡುವುದರಿಂದ ಈಗಾಗಲೆ ಸಮಾಜದ ವ್ಯವಸ್ಥೆ ಕೆಟ್ಟಿದೆ, ಇವರಿಗಿಲ್ಲದ ದೇಶಭಕ್ತಿ ಬಗ್ಗೆ ಹೇಳಿದರೆ ಇಲ್ಲಿ ಕೇಳುವರಾರು ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ರೇಣುಕಾರಾಧ್ಯ ಎಂಬುವವರು ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ಪುಸ್ತಕದಲ್ಲಿನ ವಿಷಯವನ್ನ ಉಲ್ಲೇಖಿಸಿ, “ಈ ವ್ಯಕ್ತಿ ಉತ್ತಾರಾಧಿಕಾರಿಯಾಗಿ ಆಯ್ಕೆಯಾದಾಗ ಹತ್ತು ಹನ್ನೆರಡು ವರ್ಷ ಇರಬೇಕೇನೋ ಆಗ ಮಠಕ್ಕೆ ಹೋಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಈತನನ್ನು ಕಂಡು “ಅಯ್ಯೋ ಪಾಪ ಹುಡುಗ” ಅಂದಿದ್ದರಂತೆ… ಮಾಸ್ತಿ ಅವತ್ತು ಅಯ್ಯೋ ಪಾಪ ಯಾಕಂದ್ರು ಅಂತ ಈ ಸ್ವಾಮಿಗೆ ಅವತ್ತು ಅರ್ಥ ಆಗಿದ್ರೆ ಚೆನ್ನಾಗಿರ್ತಿತ್ತು… ಸ್ವಾಮಿ ಆಗಿ ಮಠಕ್ಕೂ ದೇಶಕ್ಕೂ ವ್ಯತ್ಯಾಸ ಗೊತ್ತಿಲ್ಲ… ಅಯ್ಯೊ ಪಾಪ…. – ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ದಲ್ಲಿ ಈ ಬಗ್ಗೆ ವಿವರಗಳಿವೆ” ಎಂದು ವ್ಯಂಗ್ಯವಾಡಿದ್ದಾರೆ.

ನಿತಿನ್ ಎಂಬುವವರು, “ಇಂದಿಗೂ ಕೃಷ್ಣಮಠದಲ್ಲಿ ಪಂಕ್ತಿಭೇದದ ಮೂಲಕ ಹಿಂದೂ ಧರ್ಮದ ಕೆಳವರ್ಗದವರನ್ನು ಶೋಷಣೆ ಮಾಡುವ ನಿಮ್ಮ ಧರ್ಮನಿಷ್ಠೆಯ ಬಗ್ಗೆ ನನಗೆ ಸಂದೇಹವಿದೆ ಪೇಜಾವರ ಶ್ರೀಗಳೇ.. ಶ್ರೀಗಳು ತಮ್ಮ ಇತಿ-ಮಿತಿಗಳನ್ನು ಅರಿತು ಸಂನ್ಯಾಸ ಧರ್ಮ ಪಾಲನೆಯೊಂದಿಗೆ ಯಾವುದೇ ಪಕ್ಷದ ವಕ್ತಾರನಂತೆ ವರ್ತಿಸದಿದ್ದರೆ ಒಳ್ಳೆಯದು ಎಂಬುದು ನನ್ನ ಭಾವನೆ..” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಭರತ್ ಹೆಬ್ಬಾಳ್ ತಮ್ಮ ಪೋಸ್ಟ್‌ನಲ್ಲಿ, ಈ ಹಿಂದೆ ಪೇಜಾವರ ಶ್ರೀ ರೈತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ “ರೈತರು ಹೊಲಗದ್ದೆಗಳಲ್ಲಿ ಕಷ್ಟಪಟ್ಟು ದುಡಿದು ತಂದು ಹಾಕಿದ ಬೆಳೆಗಳನ್ನು ಎಳ್ಳಷ್ಟೂ ಕೆಲಸ ಮಾಡದೆ ಜಾತಿವಾದಿ ಪಂಕ್ತಿ ಭೋಜನದಲ್ಲಿ ದನ ತಿನ್ನೊಂಗೆ ತಿಂದು, ಪ್ರತಿಭಟನೆ ಮಾಡುತ್ತಿರುವವರು ರೈತರೊ ಇಲ್ಲವೋ ಎಂಬ ಸಂಶಯ ವ್ಯಕ್ತಪಡಿಸುವುದು.. ತಿಂದ ಬಿಟ್ಟಿ ಊಟ ಜೀರ್ಣವಾಗದಿದ್ದಲ್ಲಿ ಇನ್ನೊಬ್ಬರ ದೇಶಭಕ್ತಿಯನ್ನು ಪ್ರಶ್ನಿಸುವುದು..” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೇಜಾವರ ಶ್ರೀಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ದೇಶ ಎಂದರೆ ಬ್ರಾಹ್ಮಣ್ಯ, ಭಾರತ ದೇಶ ಎಂದರೆ ಬಿಜೆಪಿ, ಭಾರತ ದೇಶ ಎಂದರೆ ‘ಇವರು ಮಾತ್ರ’ ಎನ್ನುವುದು ಕೆಲವು ಮೂಲಭೂತವಾದಿಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಭಾರತ ಎಂದರೆ ಬಹುತ್ವದ, ಬಹುಜನರ, ಸರ್ವ ಸಂಸ್ಕೃತಿಗಳ ದೇಶ ಎಂದು ಒಪ್ಪುವುದಕ್ಕೆ ಇವರು ತಯಾರಿಲ್ಲ.

ಈ ಮನಸ್ಥಿತಿಗಳೇ ಇಂದು, ರಾಮಮಂದಿರಕ್ಕೆ ದೇಣಿಗೆ ನೀಡದವರನ್ನು ದೇಶ ಭಕ್ತರಲ್ಲ ಎಂದು ಬಿಂಬಿಸುತ್ತದೆ. ಅವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಟೀಕಿಸಿದರೆ, ಇದು ದೇಶದ್ರೋಹ ಎಂದು ಪ್ರಕರಣ ದಾಖಲಿಸಲಾಗುತ್ತದೆ. ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಿದರೆ, ಪ್ರಶ್ನಿಸಿದರೆ ಅವರೆಲ್ಲರೂ ದೇಶದ್ರೋಹಿಗಳಾಗುತ್ತಾರೆ. ಇದು ಈ ದೇಶದ ವಿಪರ್ಯಾಸವಲ್ಲದೆ ಮತ್ತೇನು?


ಇದನ್ನೂ ಓದಿ: ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೆಲ್ಲಾ ಮನುವಾದವನ್ನು ವಿರೋಧಿಸುತ್ತಾರೋ, ಅವರೆಲ್ಲರೂ ಮನುವಾದಿಗಳ ಪ್ರಕಾರ “ದೇಶದ್ರೋಹಿಗಳು”. ಮಾನವತೆಯ ವಿರೋಧಿಗಳಾಗಿರುವ ಈ ಮನುವಾದಿಗಳು ದೇಶಪ್ರೇಮದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ದೇಶಪ್ರೇಮಕ್ಕಿಂತಲೂ ಮಿಗಿಲಾದುದು ಮಾನವತಾಪ್ರೇಮ ಎಂಬುದನ್ನು ಈ ಅವಿವೇಕಿಗಳು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...