Homeಮುಖಪುಟಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

- Advertisement -
- Advertisement -

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಸಂಜೆ ಯೋಗ ಗುರು ಬಾಬಾ ರಾಮದೇವ್ ಅವರ ಕಾರ್ಟೂನ್ ಅನ್ನು ಟ್ವೀಟ್ ಮಾಡುವ ಮೂಲಕ ಪೆಟ್ರೋಲ್ ದರ ಏರಿಕೆಯನ್ನು ಟೀಕಿಸಿದ್ದಾರೆ.

ಕಾರ್ಟೂನ್‌ನಲ್ಲಿ ಬಾಬಾ ರಾಮ್‌ದೇವ್ ಅವರನ್ನು ಪೆಟ್ರೋಲ್ ಬಂಕ್‌ವೊಂದರಲ್ಲಿ ತಲೆಕೆಳಗೆ ಮಾಡಿ-ಕಾಲು ಮೇಲೆ ಮಾಡಿದ ಭಂಗಿಯಲ್ಲಿ ತೋರಿಸಲಾಗಿದೆ. ಮೇಲ್ಗಡೆ “ಲೀಟರ್ ರೂ. 90” ಪಠ್ಯವನ್ನು ಹೊಂದಿರುವ ಬೋರ್ಡ್ ಇದೆ. ಚಿತ್ರವು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಸಹ ಹೊಂದಿದೆ, ಇದನ್ನು ತರೂರ್ ತಮ್ಮ ಟ್ವೀಟ್‌ನೊಂದಿಗೆ ಅನುವಾದಿಸಿ ಪೋಸ್ಟ್ ಮಾಡಿದ್ದಾರೆ.

“ನೀವು ಬಾಬಾ ರಾಮ್‌ದೇವ್ ಅವರಿಂದ ಯೋಗ ಪಾಠಗಳನ್ನು ತೆಗೆದುಕೊಂಡರೆ, ನೀವೂ ಸಹ ಪೆಟ್ರೋಲ್ ದರವನ್ನು ಲೀಟರ್‌ಗೆ 06 ರೂಪಾಯಿಗೆ ನೋಡಬಹುದು!” ಎಂದು ವ್ಯಂಗ್ಯ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಸತತ ಎಂಟನೇ ದಿನಕ್ಕೆ ದರಗಳನ್ನು ಹೆಚ್ಚಿಸಿದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರ ನಾಲ್ಕು ಮಹಾನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದವು. ತೈಲದರ ಎಂಟನೆ ಸಲ ಸುಮಾರು 30 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಈಗ ರೂ. 89.29 (ದೆಹಲಿ) ಮತ್ತು ರೂ. 95.75 (ಮುಂಬೈ) ನಡುವೆ ಮಾರಲ್ಪಡುತ್ತಿದೆ.

ಡೀಸೆಲ್ ಬೆಲೆ ರೂ. 79.70 (ದೆಹಲಿ) ಮತ್ತು ರೂ. 86.72 (ಮುಂಬೈ) ನಡುವೆ ಇದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಫೆಬ್ರವರಿ 14 ರಂದು ಪ್ರೀಮಿಯಂ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ. 100 ತಲುಪಿದೆ.

ಜನವರಿ 6 ರಿಂದ ಇಂಧನ ಬೆಲೆಗಳು ಭಾರತದಾದ್ಯಂತ ಏರಿಕೆಯಾಗುತ್ತಿದ್ದು, ಅದಕ್ಕೂ ಮೊದಲು ಸುಮಾರು ಒಂದು ತಿಂಗಳವರೆಗೆ ಬದಲಾಗದೆ ಉಳಿದಿದ್ದವು.. ದೇಶಗಳು ಲಸಿಕಾ ಅಭಿಯಾನ ನಡೆಸುತ್ತಿರುವ ಈ ಸಂದರ್ಭದಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳ ದರ ಕಡಿಮೆ ಇದ್ದರೂ ಈ ಹೆಚ್ಚಳವಾಗಿದೆ. ಮಾರುಕಟ್ಟೆಗಳು ಮತ್ತು ವ್ಯವಹಾರಗಳು ಕೋವಿಡ್ ಪೂರ್ವದ ಸಾಮಾನ್ಯ ಪ್ರಮಾಣದ ದರವನ್ನು ನಿರೀಕ್ಷಿಸುತ್ತಿವೆ.

ಕಳೆದ ವಾರ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಂತರರಾಷ್ಟ್ರೀಯ ‘ಬೆಲೆ ಯಾಂತ್ರಿಕ ವ್ಯವಸ್ಥೆ’ಯಿಂದ ನಿಯಂತ್ರಿಸುತ್ತಾರೆ ಮತ್ತು “ಸುಮಾರು 250 ದಿನ (ಕಳೆದ 300 ದಿನಗಳಲ್ಲಿ) ಕೇಂದ್ರವು ಬೆಲೆಗಳನ್ನು ಹೆಚ್ಚಿಸಿಲ್ಲ ಅಥವಾ ಕಡಿಮೆ ಮಾಡಿಲ್ಲ” ಎಂದು ಸೂಚಿಸಿದ್ದರು.

ಸೋಮವಾರ ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು, ಪ್ರಧಾನಿ ನರೇಂದ್ರ ಮೋದಿಯವರಂತೆ ಉಡುಗೆ ತೊಟ್ಟು, ಎತ್ತಿನ ಬಂಡಿಯಲ್ಲಿ ಭುವನೇಶ್ವರ ಸುತ್ತ ಸಂಚರಿಸುತ್ತ, ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ ಎಂದು ಜನರನ್ನು ಕೇಳಿದ್ದರು.

ಕಳೆದ ವಾರ ಸಮಾಜವಾದಿ ಪಕ್ಷದ ಸಂಸದ ವಿಶಾಂಬರ ಪ್ರಸಾದ್ ನಿಷಾದ್ ಅವರು ರಾಜ್ಯಸಭೆಯಲ್ಲಿ ಹೀಗೆ ವ್ಯಂಗ್ಯ ಮಾಡಿದ್ದರು: “ಮಾತೆ ಸೀತಾ ಅವರ ನೇಪಾಳ ಮತ್ತು ರಾವಣನ ಭೂಮಿ ಲಂಕಾದಲ್ಲಿ ಪೆಟ್ರೋಲ್ ಅಗ್ಗವಾಗಿದೆ. ಆದರೆ ಇಲ್ಲಿ ರಾಮನ ಭೂಮಿಯಲ್ಲಿ ಮಾತ್ರ ಇಲ್ಲ…..”

ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಎದುರಿಸುತ್ತಿರುವ ಅಸ್ಸಾಂ ಮತ್ತು ಮೇಘಾಲಯ ಬೆಲೆಗಳನ್ನು ಕಡಿತಗೊಳಿಸಿವೆ. ಕೆಲವು ವಾರಗಳಲ್ಲಿ ಬಿಜೆಪಿ ಮರುಚುನಾವಣೆಗೆ ಹೋಗುತ್ತಿರುವ ಅಸ್ಸಾಂ, ಕಳೆದ ವಾರ ಪ್ರತಿ ಲೀಟರ್‌ಗೆ ರೂ. 5 ದರವನ್ನು ಕಡಿತಗೊಳಿಸಿತು. ಈ ಹಿಂದೆ ಪ್ರತಿ ಲೀಟರ್‌ಗೆ ರೂ. 2 ರಷ್ಟು ಬೆಲೆ ಕಡಿತಗೊಳಿಸಿದ ಮೇಘಾಲಯ ಮಂಗಳವಾರ ರಾತ್ರಿ ಪ್ರತಿ ಲೀಟರ್‌ಗೆ ರೂ 5.40 ಕಡಿತಗೊಳಿಸುವುದಾಗಿ ಘೋಷಿಸಿತು.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಳವು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ, ಇದಕ್ಕಾಗಿ ಕಾಂಗ್ರೆಸ್ ಸೋಮವಾರ “ನರೇಂದ್ರ ಮೋದಿಯವರ ನಿರ್ದಯ ಮತ್ತು ಅನೈತಿಕ ಸರ್ಕಾರ” ದ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕೇಂದ್ರವು ಹೆಚ್ಚಿಸಿದ ನಂತರ ಇದು ಸಬ್ಸಿಡಿ ರಹಿತ ಸಿಲಿಂಡರ್‌ಗೆ ಈಗ ರೂ. 769ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹೆಚ್ಚಳವನ್ನು ಟೀಕಿಸಿದ್ದರು, ಮೋದಿ ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...