Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...