Homeಮುಖಪುಟ‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಪ್ರತಿಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್, ಪ್ರಧಾನಮಂತ್ರಿಯವರು “ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಭಾನುವಾರ ಪ್ರಧಾನಿ ಮೋದಿ ತಮಿಳುನಾಡಿನ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಕೈ ಹಿಡಿದು, ಕೈ ಮೇಲಕ್ಕೆ ಎತ್ತಿ ಸಂಭ್ರಮಿಸಿದ್ದನ್ನು ಸ್ಟಾಲಿನ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಡಳಿತಾರೂಢ ಎಐಡಿಎಂಕೆಯ ಇಬ್ಬರು ಉನ್ನತ ನಾಯಕರ ಕೈಗಳನ್ನು ಹಿಡಿದು ಮೇಲಕ್ಕೆತ್ತಿ ಚುನಾವಣಾ ಭಂಗಿಯನ್ನು ಪ್ರದರ್ಶಿಸಿದ್ದರು. ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಮುನ್ನ ರಾಜಕೀಯವಾಗಿ ಮಹತ್ವದ ಸಭೆಯಲ್ಲಿ ಪಿಎಂ ಮೋದಿ, ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್‌ಸೆಲ್ವಂ ಅವರು ತಮ್ಮ ಕೈಗಳನ್ನು ಜೋಡಿಸಿ ಮೇಲಕ್ಕೆ ಎತ್ತಿಕೊಂಡು ವೇದಿಕೆಯ ಮೇಲೆ ನಿಂತಿದ್ದರು.

“ಒಂದು ಕಡೆ ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಮತ್ತು ಮತ್ತೊಂದೆಡೆ ಅವರು ಭ್ರಷ್ಟಾಚಾರದ ಆರೋಪ ಹೊತ್ತಿರುವ ಇಬ್ಬರು ಜನರ ಕೈಗಳನ್ನು ಹಿಡಿದಿದ್ದಾರೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸ್ಟಾಲಿನ್ ಹೇಳಿದ್ದಾರೆ.

“ಪಿಎಂ ಮೋದಿ ಇಪಿಎಸ್ ಮತ್ತು ಒಪಿಎಸ್‌ಗಳ ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಾರೆಯೇ” ಎಂದು ಅವರು ಪ್ರಶ್ನಿಸಿದರು, (ಇಪಿಎಸ್-ಮುಖ್ಯಮಂತ್ರಿ ಇ.ಪಳಮಿಸ್ವಾಮಿ ಮತ್ತು ಒಪಿಎಸ್-ಡಿಸಿಎಂ ಒ. ಪನ್ನೀರ್‌ಸೆಲ್ವಂ)

“ಅಂತಹ ಕಳಂಕಿತ ಕೈಗಳನ್ನು ಪ್ರಧಾನಿ ಹಿಡಿದಾಗ, ಅವರು ಭ್ರಷ್ಟಾಚಾರವನ್ನು ಸ್ವೀಕರಿಸಿ ಬೆಂಬಲಿಸುತ್ತಾರೆಯೇ ಎಂಬ ಅನುಮಾನ ಹುಟ್ಟುತ್ತದೆ’ ಎಂದು ಸ್ಟಾಲಿನ್ ಟೀಕಿಸಿದ್ದಾರೆ.
ಸರ್ಕಾರದ ಕಾಂಟ್ರಾಕ್ಟ್‌ಗಳನ್ನು ತನ್ನ ಸಂಬಂಧಿಕರಿಗೆ ಹಸ್ತಾಂತರಿಸುವಲ್ಲಿ, ಹೆದ್ದಾರಿ ಟೆಂಡರ್‌ಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಸಂಪತ್ತಿನಲ್ಲಿ ಮುಖ್ಯಮಂತ್ರಿ ಪಾತ್ರವಿದೆ ಎಂದು ಡಿಎಂಕೆ ಆರೋಪಿಸಿದೆ. ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿತ್ತು ಆದರೆ ಎಐಎಡಿಎಂಕೆ ಸರ್ಕಾರದ ಮೇಲ್ಮನವಿ ಮೇರೆಗೆ ಈ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಡಿಸಿಎಂ ಪನ್ನೀರ್‌ಸೆಲ್ವಂ ಅಥವಾ ಒಪಿಎಸ್ ಅಪಾರ ಅಕ್ರಮ ಸಂಪತ್ತಿನ ಆರೋಪ ಎದುರಿಸುತ್ತಿದ್ದಾರೆ.

ಈ ಇಬ್ಬರೂ ನಾಯಕರನ್ನು ಯಾವುದೇ ನ್ಯಾಯಾಲಯವು ದೋಷಾರೋಪಣೆ ಮಾಡಿಲ್ಲ ಎಂದು ಸೂಚಿಸಿದಾಗ, ಸ್ಟಾಲಿನ್, “ನ್ಯಾಯಾಲಯವು ಅವರನ್ನು ನಿರಪರಾಧಿಗಳೆಂದು ಕೂಡ ಎಂದು ಹೇಳಿಲ್ಲ. ಪ್ರಧಾನಿ ಅದನ್ನು ಬೆಂಬಲಿಸುವುದು ಇನ್ನೂ ತಪ್ಪು.” ಎಂದಿದ್ದಾರೆ.

ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ನಾರಾಯಣನ್ ತಿರುಪತಿ, “ಇಪಿಎಸ್ ಅಥವಾ ಒಪಿಎಸ್ ವಿರುದ್ಧ ಯಾವುದೇ ಪ್ರಕರಣಗಳು ಸಾಬೀತಾಗಿಲ್ಲ. ಪ್ರಧಾನಿ ಇಬ್ಬರು ತಮಿಳು ನಾಯಕರನ್ನು ಗೌರವಿಸುತ್ತಿದ್ದಾರೆ ಮತ್ತು ಅವರ ಕೈಗಳನ್ನು ಹಿಡಿದಿದ್ದಾರೆ ಎಂದು ಸ್ಟಾಲಿನ್ ಹೆಮ್ಮೆಪಡಬೇಕು” ಎಂದಿದ್ದು, ‘ಸ್ಟಾಲಿನ್ ನಮ್ಮ ಮೈತ್ರಿ ಬಗ್ಗೆ ಅಸೂಯೆ ಪಡುತ್ತಿದ್ದಾರಷ್ಟೇ’ ಎಂದಿದ್ದಾರೆ.

ಮೇ ವೇಳೆಗೆ ನಡೆಯಲಿರುವ ತಮಿಳುನಾಡು ಚುನಾವಣೆಗೆ ಬಿರುಸಿನ ತಯಾರಿ ನಡೆಸಿರುವ ಡಿಎಂಕೆ, ಎಐಎಡಿಎಂಕೆಯ ಎರಡು ಅವಧಿಯ ಭ್ರಷ್ಟಾಚಾರ ವಿಷಯವನ್ನು ಕೇಂದ್ರೀಕರಿಸುವ ಅಭಿಯಾನದೊಂದಿಗೆ ಆಕ್ರಮಣಕಾರಿಯಾಗಿ ಬೀದಿಗಿಳಿದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 39 ಸ್ಥಾನಗಳನ್ನು ಗೆದ್ದಿದ್ದರೆ, ಎಐಡಿಎಂಕೆ-ಬಿಜೆಪಿ ಮೈತ್ರಿ ಒಂದು ಸ್ಥಾನ ಮಾತ್ರ ಗೆದ್ದಿತ್ತು.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...