Homeಮುಖಪುಟಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು- ಮುಖ್ಯಮಂತ್ರಿ ವಿ.ನಾರಾಯಣ ಸಾಮಿ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದರು.

ಸದ್ಯ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ. ಉನ್ನತ ಹುದ್ದೆಯಿಂದ ತೆಗೆದುಹಾಕಿದ ನಂತರ ಕಿರಣ್ ಬೇಡಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಜೀವಮಾನದ ಅನುಭವ ಎಂದಿದ್ದಾರೆ.

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನನ್ನ ಕೆಲಸದ ಭಾಗವಾಗಿದ್ದ ಎಲ್ಲರಿಗೂ ಮತ್ತು ಎಲ್ಲಾ ಪುದುಚೇರಿಯ ಜನರಿಗೂ, ಸಾರ್ವಜನಿಕ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು 71 ವರ್ಷದ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಟೀಮ್ ರಾಜ್ ನಿವಾಸ್ (ರಾಜ್ ನಿವಾಸ್ ತಂಡ) ಸಾರ್ವಜನಿಕ ಹಿತಾಸಕ್ತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಕಿರಣ್ ಬೇಡಿ ತಮ್ಮ ಧನ್ಯವಾದದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಏನೇ ಮಾಡಿದ್ದರು ಅದು ಪವಿತ್ರ ಕರ್ತವ್ಯ. ನನ್ನ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದಿದ್ದಾರೆ.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಇನ್ನು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ವಿ.ನಾರಾಯಣ ಸಾಮಿ, “ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ನಮ್ಮ ಶಾಸಕರನ್ನು ಬೇಟೆಯಾಡುತ್ತಿದೆ. 3 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಯೋಜನೆಯ ಬಗ್ಗೆ ಜನರಿಗೆ ತಿಳಿದಿದೆ, ಮತದಾರರು 2021 ರ ಚುನಾವಣೆಯ ಸಮಯದಲ್ಲಿ ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದಿದ್ದಾರೆ.

ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ನಾಲ್ಕು ಕಾಂಗ್ರೆಸ್ ನಾಯಕರು ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...