Homeಮುಖಪುಟಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು- ಮುಖ್ಯಮಂತ್ರಿ ವಿ.ನಾರಾಯಣ ಸಾಮಿ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದರು.

ಸದ್ಯ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ. ಉನ್ನತ ಹುದ್ದೆಯಿಂದ ತೆಗೆದುಹಾಕಿದ ನಂತರ ಕಿರಣ್ ಬೇಡಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಜೀವಮಾನದ ಅನುಭವ ಎಂದಿದ್ದಾರೆ.

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನನ್ನ ಕೆಲಸದ ಭಾಗವಾಗಿದ್ದ ಎಲ್ಲರಿಗೂ ಮತ್ತು ಎಲ್ಲಾ ಪುದುಚೇರಿಯ ಜನರಿಗೂ, ಸಾರ್ವಜನಿಕ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು 71 ವರ್ಷದ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಟೀಮ್ ರಾಜ್ ನಿವಾಸ್ (ರಾಜ್ ನಿವಾಸ್ ತಂಡ) ಸಾರ್ವಜನಿಕ ಹಿತಾಸಕ್ತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಕಿರಣ್ ಬೇಡಿ ತಮ್ಮ ಧನ್ಯವಾದದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಏನೇ ಮಾಡಿದ್ದರು ಅದು ಪವಿತ್ರ ಕರ್ತವ್ಯ. ನನ್ನ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದಿದ್ದಾರೆ.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಇನ್ನು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ವಿ.ನಾರಾಯಣ ಸಾಮಿ, “ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ನಮ್ಮ ಶಾಸಕರನ್ನು ಬೇಟೆಯಾಡುತ್ತಿದೆ. 3 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಯೋಜನೆಯ ಬಗ್ಗೆ ಜನರಿಗೆ ತಿಳಿದಿದೆ, ಮತದಾರರು 2021 ರ ಚುನಾವಣೆಯ ಸಮಯದಲ್ಲಿ ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದಿದ್ದಾರೆ.

ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ನಾಲ್ಕು ಕಾಂಗ್ರೆಸ್ ನಾಯಕರು ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...