Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...