Homeಕರ್ನಾಟಕದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

ದಿಶಾ ಬಂಧನ ಕನ್ನಡಿಗರಿಗೆ ಮಾಡಿರುವ ಅಪಮಾನ! ಜಗತ್ತಿನ ಮಕ್ಕಳೆದುರು ತಲೆತಗ್ಗಿಸಿದ ಭಾರತ!

- Advertisement -
- Advertisement -

ಟೂಲ್ ಕಿಟ್ ಕೇಸ್‌ನಲ್ಲಿ ದಿಶಾ ರವಿ ಎಂಬ 21 ವರ್ಷ ವಯಸ್ಸಿನ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ.

 

ದೆಹಲಿ ಪೊಲೀಸರು ನೇರವಾಗಿ ಬೆಂಗಳೂರಿಗೆ “ದಾಳಿ” ಮಾಡಿ ಕನ್ನಡಿಗ ಹೋರಾಟಗಾರ್ತಿಯನ್ನು ಬಂಧಿಸಿದ್ದು ಕನ್ನಡಿಗರಿಗೆ ಮಾಡಿದ ಅಪಮಾನ. ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿಯನ್ನೇ ನೀಡದೆ ದಿಶಾ ಮನೆಗೆ ದಾಳಿ ಮಾಡಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ ಬಂಧಿಸಿರೋದು ಒಕ್ಕೂಟ ವ್ಯವಸ್ಥೆಗೆ ಅವಮಾನವಲ್ಲದೆ ಮತ್ತೇನು?
ಪ್ರತೀ ರಾಜ್ಯಗಳು ತನ್ನದೇ ಆದ ಸ್ವತಂತ್ರ ಪೊಲೀಸ್ ಬಲವನ್ನು ಹೊಂದಿದೆ. ರಾಜ್ಯದ ಆಗುಹೋಗುಗಳ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ದೆಹಲಿ ಪೊಲೀಸರು ಮಾತ್ರ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುತ್ತದೆ. ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ ಪೊಲೀಸರು ಎಂಬ ಕಾರಣಕ್ಕೆ ಬೇಕುಬೇಕಾದ ರಾಜ್ಯಗಳಲ್ಲಿ ಅವರು ದಾಳಿ ನಡೆಸುವಂತಿಲ್ಲ. ಇಂತಹ ಉದ್ಧಟತನಗಳು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ನಡೆಸುವ ದಬ್ಬಾಳಿಕೆಯನ್ನು ಸೂಚಿಸುತ್ತದೆ.

ಜಾಗತಿಕ ತಾಪಮಾನದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ದಿಶಾ ರವಿ ಕನ್ನಡಿಗರ ಹೆಮ್ಮೆ. ಸ್ವೀಡನ್‌ನ ಗ್ರೆಟಾ ಥನ್‌ಬರ್ಗ್ ಮತ್ತು ಬೆಂಗಳೂರಿನ ದಿಶಾ ರವಿ ಹೋರಾಟದ ಸಹಪಯಣಿಗರು. ಆದರೆ ಗ್ರೆಟಾ ಥನ್‌ಬರ್ಗ್ ಅವರನ್ನು ಅಲ್ಲಿನ ಸರ್ಕಾರ ನಡೆಸಿಕೊಂಡ ರೀತಿಗೂ, ದಿಶಾ ರವಿಯವರನ್ನು ಇಲ್ಲಿನ ನಮ್ಮ ಸರ್ಕಾರ ನಡೆಸಿಕೊಂಡ ರೀತಿಯನ್ನೂ ನಾವು ಆತ್ಮವಿಮಶೆ ಮಾಡಿಕೊಳ್ಳಬೇಕಿದೆ. ದಿಶಾ ಮತ್ತು ಗ್ರೆಟಾ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು. ಒಂದೇ ಗುರಿ, ಉದ್ದೇಶ ಹೊಂದಿರುವವರು. ಗ್ರೆಟಾ ಅಲ್ಲಿನ ಸರ್ಕಾರದ ಆತಿಥ್ಯದಲ್ಲಿದ್ದರೆ, ನಮ್ಮ ದಿಶಾ ಪೊಲೀಸ್ ಆತಿಥ್ಯದಲ್ಲಿದ್ದಾರೆ.

ಗ್ರೆಟಾ ಥನ್‌ಬರ್ಗ್ ತನ್ನ ನೇರ ಮಾತಿನ ವಿಧಾನಕ್ಕೆ ಹೆಸರುವಾಸಿಯಾಗಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕವಾಗಿ ಸಭೆಗಳಲ್ಲಿ ಹವಾಮಾನ ಬಿಕ್ಕಟ್ಟು ಕುರಿತು ಅವಳು ವಿವರಿಸಿ, ಪರಿಹಾರ ಕ್ರಮಗಳನ್ನು ಸರ್ಕಾರದ ಮುಂದಿಟ್ಟು ಒತ್ತಾಯಿಸುತ್ತಾಳೆ. ಸರ್ಕಾರ ಕ್ರಮ ಕೈಗೊಳ್ಳದೇ ಹೋದಾಗ ಪ್ರತಿಭಟಿಸಿದ್ದಾಳೆ. ಶಾಲೆಯಲ್ಲೆ ಗ್ರೆಟಾ ಮುಷ್ಕರ ಹೂಡಿದ್ದೂ ಇದೆ, ಸಂಸತ್ತಿಗೆ ಮುತ್ತಿಗೆ ಹಾಕಿದ್ದೂ ಇದೆ. ನಮ್ಮ ದಿಶಾ ಕೂಡ ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಸ್ವೀಡನ್‌ನಲ್ಲಿ ಗೋಲ್ಡೆನ್ ಕಮೆರಾ ಪ್ರಶಸ್ತಿ (2019); ಫ್ರಿಟ್ ಆರ್ಡ್ ಪ್ರಶಸ್ತಿ (2019); ರಾಚೆಲ್ ಕಾರ್ಸನ್ ಪ್ರಶಸ್ತಿ (2019); ಆತ್ಮಸಾಕ್ಷಿಯ ರಾಯಭಾರಿ ಪ್ರಶಸ್ತಿ (2019); ರಾಯಲ್ ಸ್ಕಾಟಿಷ್ ಜಿಯಾಗ್ರಫಿಕಲ್ ಸೊಸೈಟಿಯ ಫೆಲೋ (FRSGS -Fellow of the Royal Scottish Geographical Society); ಗೆಡ್ಡೆಸ್ ಎನ್ವಿರಾನ್ಮೆಂಟ್ ಮೆಡಲ್ (2019); ಜೀವನೋಪಾಯ ಹಕ್ಕು ಪ್ರಶಸ್ತಿ (2019); ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ (2019); ವರ್ಷದ ವ್ಯಕ್ತಿ (2019) ಹೀಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಆದರೆ ನಾವು ಅದೇ ಆಂದೋಲನದ ಕನ್ನಡಿಗ ಹೋರಾಟಗಾರ್ತಿಯನ್ನು ನಡೆಸಿಕೊಂಡ ರೀತಿ ಯಾವ ಬಗೆಯದು? ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ.

2019 ರ ’ಟೈಮ್ ನಿಯತಕಾಲಿಕೆ’ಯು ಗ್ರೆಟಾ ಥನ್‌ಬರ್ಗ್‌ಅನ್ನು 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಹೆಸರಿಸಿದೆ. ಆದರೆ ಗ್ರೆಟಾ ಥನ್‌ಬರ್ಗ್‌ಗೆ ಯಾವ ರೀತಿಯಲ್ಲೂ ಕಮ್ಮಿ ಇಲ್ಲದ ಜಾಗತಿಕ ತಾಪಮಾನ ವಿಚಾರದ ಹೋರಾಟಗಾರ್ತಿ ದಿಶಾಳನ್ನು ಇಲ್ಲಿನ ಮಾಧ್ಯಮಗಳು ಭಯೋತ್ಪಾದಕಿಯೆಂದೂ, ದೇಶದ್ರೋಹಿಯೆಂದೂ ಚಿತ್ರಿಸುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಮಣ್ಣು ತಿನ್ನಲಿ. ಕನಿಷ್ಟ ಕನ್ನಡ ಮಾಧ್ಯಮಗಳಾದರೂ ದಿಶಾ ನಮ್ಮ ಸಾಕ್ಷಿ ಪ್ರಜ್ಞೆ ಎಂಬುದನ್ನು ಮನಗಾಣಬೇಕಿತ್ತು. ಪ್ರಶಸ್ತಿ ಘೋಷಣೆ ಬಿಡಿ, ಕನಿಷ್ಟ ಮೌನವಾಗಿದ್ದರೂ ಸಾಕಿತ್ತು. ದಿಶಾಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಧ್ವನಿ ಎಂದು ಹೆಮ್ಮೆಪಟ್ಟುಕೊಳ್ಳುವ ಕನ್ನಡ ಮಾಧ್ಯಮವನ್ನು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ.
ದಿಶಾಳ ಸಹವರ್ತಿ ಗ್ರೆಟಾ ಥನ್‌ಬರ್ಗ್ ಅವರನ್ನು 2019ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಯಿತು. ನಾವು ದಿಶಾಳಿಗೆ ದೇಶದ್ರೋಹಿ ಪಟ್ಟ ಕಟ್ಟಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪಿತೂರಿ ಎಂದು ಸೆಕ್ಷನ್ ಜಡಿದು ಜೈಲಿಗಟ್ಟಿದ್ದೇವೆ.

ಭಾರತ ವಿಶ್ವಗುರು ಆಗುತ್ತದೆ ಎಂದು ಬಲಪಂಥೀಯರು ಭಾಷಣ ಮಾಡಿದ್ದನ್ನು ಕೇಳಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಭಾರತವೇ ವಿಶ್ವಗುರುವಾಗಿತ್ತು. ಹಲವು ಭಾಷೆ, ಹಲವು ಚಿಂತನೆ, ಹಲವು ಬಣ್ಣಗಳಿಗೆ ಈ ಹಿಂದೆ ಭಾರತದಲ್ಲಿ ಮುಕ್ತ ಸ್ವಾತಂತ್ರ್ಯ ಇತ್ತು. ಹಾಗಾಗಿಯೇ ವಿಶ್ವದ ಅತ್ಯುನ್ನತ ಪ್ರಜಾಸತ್ತಾತ್ಮಕ ದೇಶಗಳ ಸಾಲಿನಲ್ಲಿ ನಾವೂ ನಿಲ್ಲುತ್ತಿದ್ದೆವು. ಈಗ ಇಡೀ ವಿಶ್ವದಲ್ಲಿ ದಿಶಾಳ ವಿಚಾರ ಚರ್ಚೆಯಾಗುತ್ತಿದೆ. ಸರ್ಕಾರದ ವಿರುದ್ಧದ ಸಾಮಾಜಿಕ ಜಾಲತಾಣದ ಹೋರಾಟವನ್ನು ರೂಪಿಸಿದಳು ಎಂಬ ಆರೋಪ ಹೊರಿಸಿ ಯುವ ಹೋರಾಟಗಾರ್ತಿಯೊಬ್ಬಳನ್ನು ಬಂಧಿಸಿ ವಿಶ್ವದ ಮುಂದೆ ನಮ್ಮ ಸಣ್ಣತನವನ್ನು ತೋರಿಸಿದ್ದೇವೆ.

ದಿಶಾ ಮತ್ತು ಗ್ರೆಟಾ ಒಟ್ಟಾಗಿ “ಭವಿಷ್ಯಕ್ಕಾಗಿ ಶುಕ್ರವಾರ” ಎಂಬ ಹೆಸರಿನಲ್ಲಿ “ಶಾಲಾ ಹವಾಮಾನ ಮುಷ್ಕರ ಆಂದೋಲನವನ್ನು” ಸಂಘಟಿಸುತ್ತಿದ್ದರು. 2019ರಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಹಲವು ಪ್ರತಿಭಟನೆಗಳು ವಿಶ್ವದೆಲ್ಲೆಡೆ ನಡೆದವು. ಜಗತ್ತಿನಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಯುವ ಹೋರಾಟಗಾರ್ತಿ ದಿಶಾ ನಮ್ಮವಳು, ನಮ್ಮ ಕನ್ನಡಿಗಳು ಎಂಬುದು ನಮ್ಮ ಹೆಮ್ಮೆ. ಈಗ ನಾವು ದಿಶಾ ಬಿಡುಗಡೆಗೆ ಕನ್ನಡಿಗರಾಗಿ ಹೋರಾಟ ನಡೆಸಬೇಕಿದೆ. ಇಲ್ಲದೇ ಇದ್ದಲ್ಲಿ ಕನ್ನಡಿಗರು ವಿಶ್ವದ ಮಕ್ಕಳ ಎದುರು ತಲೆತಗ್ಗಿಸಿ ನಿಲ್ಲಬೇಕಾಗುತ್ತದೆ.

ಹರೀಶ್ ಕುಮಾರ್ ಬಿ
(ಹೋರಾಟಗಾರರು ಮತ್ತು ಕರ್ನಾಟಕ ರಣಧೀರ ಪಡೆ ಸಂಘಟನೆಯ ಮುಖಂಡರು. ನೆಲ, ಭಾಷೆ ಮತ್ತು ಒಕ್ಕೂಟ ವ್ಯವಸ್ಥೆಯ ಉಳಿವಿಗಾಗಿ ಹಲವು ಹೋರಾಟಗಳನ್ನು ರೂಪಿಸಿ ಮುನ್ನಡೆಸುತ್ತಿದ್ದಾರೆ)


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...