Homeಮುಖಪುಟಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

"ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷಿಸಲು ಸಾಧ್ಯವಿಲ್ಲ" ಎಂದು ದೆಹಲಿ ಕೋರ್ಟ್ ಹೇಳಿದೆ.

- Advertisement -
- Advertisement -

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಪ್ರಿಯಾ ರಮಣಿ ಮೇಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿರುವ ಕೋರ್ಟ್ “ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

2018 ರಲ್ಲಿ ಭಾರಿ ಸದ್ದು ಮಾಡಿದ್ದ #MeToo ವಿವಾದದ ಸಮಯದಲ್ಲಿ, ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ವಿರುದ್ದ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದರೆ ಪತ್ರಕರ್ತೆಯ ವಿರುದ್ಧ ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ಕುರಿತು ದೆಹಲಿ ಕೋರ್ಟ್ ವಿಚಾರಣೆ ನಡೆಸಿ ಇಂದು ತೀರ್ಪು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಅಕ್ಬರ್ ಅವರು ರಮಣಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದಾದ ಎರಡು ದಿನಗಳ ನಂತರ, ಅಕ್ಟೋಬರ್ 17, 2018 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

“ಭಾರತೀಯ ಸಂವಿಧಾನವು ಮಹಿಳೆಯರಿಗೆ ತನ್ನ ಕುಂದುಕೊರತೆಗಳನ್ನು ಯಾವುದೇ ವೇದಿಕೆಯ ಮುಂದೆ ಮತ್ತು ಯಾವುದೇ ಸಮಯದಲ್ಲಿ ಮಂಡಿಸಲು ಅನುವು ಮಾಡಿಕೊಡುತ್ತದೆ “ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ತಿಳಿಸಿದ್ದಾರೆ.

ಪತ್ರಕರ್ತೆ ಪ್ರಿಯಾ ರಮಣಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು 2018 ರ ಅಕ್ಟೋಬರ್‌ 15 ರಂದು ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. 2021 ರ ಫೆಬ್ರವರಿ 1 ರಂದು ಎರಡು ಕಡೆಯ ವಾದಗಳನ್ನು ಆಲಿಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಮುಚ್ಚಿದ ಬಾಗಿಲುಗಳ ಹಿಂದೆ ಹೆಚ್ಚಿನ ಬಾರಿ ಲೈಂಗಿಕ ಕಿರುಕುಳ ನಡೆಯುತ್ತಿರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ … ದುರುಪಯೋಗಕ್ಕೆ ಒಳಗಾಗುವ ಹೆಚ್ಚಿನ ಮಹಿಳೆಯರು ತಮ್ಮ ಮೇಲಿನ ಕಳಂಕ ಮತ್ತು ದಾಳಿಯಿಂದಾಗಿ ಹೆಚ್ಚಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಹೇಳಿದ್ದಾರೆ.

ಲೈಂಗಿಕ ದಾಳಿ ಮತ್ತು ಕಿರುಕುಳಕ್ಕೆ ಒಳಗಾದ ಸಂತ್ರಸ್ಥೆಯ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಇದು 20 ವರ್ಷದ ಹಿಂದಿನ ಪ್ರಕರಣವಾಗಿರಬಹುದು. ಮಹಿಳೆಯು ತನಗಾದ ಅನ್ಯಾಯದ ವಿರುದ್ಧ ದಶಕಗಳ ನಂತರವೂ ದನಿಯೆತ್ತುವ ಹಕ್ಕು ಹೊಂದಿದ್ದಾಳೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಎಂ.ಜೆ. ಅಕ್ಬರ್ ಏಷ್ಯನ್ ಏಜ್ ಮುಖ್ಯಸ್ಥರಾಗಿದ್ದಾಗ, ಸುಮಾರು 20 ವರ್ಷಗಳ ಹಿಂದೆ ಈ ಲೈಂಗಿಕ ದುಷ್ಕೃತ್ಯ ನಡೆದಿದೆ ಎಂದು ಪತ್ರಿಕೆಯ ಲೇಖನವೊಂದರಲ್ಲಿ ಪ್ರಿಯಾ ರಮಣಿ ಬರೆದಿದ್ದರು. ಉದ್ಯೋಗ ಸಂದರ್ಶನಕ್ಕಾಗಿ ನನ್ನನ್ನು ತಮ್ಮ ಹೋಟೆಲ್ ಮಲಗುವ ಕೋಣೆಗೆ ಕರೆದು ಅಕ್ಬರ್ ಅನುಚಿತವಾಗಿ ವರ್ತಿಸಿದ್ದರು ಎಂದು ರಮಣಿ ಆರೋಪಿಸಿದ್ದರು. ಅವರ ಲೇಖನದ ಪರಿಣಾಮವಾಗಿ, ಸುಮಾರು ಒಂದು ಡಜನ್ ಮಹಿಳೆಯರು ಮಾಜಿ ಸಂಪಾದಕ ಅಕ್ಬರ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಹೊರಿಸಿದ್ದರು


ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...