Homeಕರ್ನಾಟಕಟಿಕೆಟ್ ಹಂಚಿಕೆ: ಒಬಿಸಿಗೆ ದಕ್ಕಿದ್ದೆಷ್ಟು? ಮೈತ್ರಿ ಪಕ್ಷಗಳು – 8, ಬಿಜೆಪಿ - 1

ಟಿಕೆಟ್ ಹಂಚಿಕೆ: ಒಬಿಸಿಗೆ ದಕ್ಕಿದ್ದೆಷ್ಟು? ಮೈತ್ರಿ ಪಕ್ಷಗಳು – 8, ಬಿಜೆಪಿ – 1

- Advertisement -
- Advertisement -

ಮೀಸಲೇತರ ಕ್ಷೇತ್ರಗಳಲ್ಲಿ ಬಿಜೆಪಿ 95% ಕ್ಷೇತ್ರಗಳಲ್ಲಿ ಮೇಲ್ಜಾತಿಯವರಿಗೆ ಟಿಕೆಟ್. ಸಮತೋಲನ ಕಾಯ್ದುಕೊಂಡ ಮೈತ್ರಿ ಪಕ್ಷಗಳು. ಮಹಿಳೆಯರಿಗೆ 33% ಬಲುದೂರ.

ಈ ಲೋಕಸಭಾ ಚುನಾವಣೆಯಲ್ಲಿ ಯಾವ್ಯಾವ ಪಕ್ಷಗಳು ಯಾವ್ಯಾವ ಜಾತಿಗಳಿಗೆ ಟಿಕೆಟ್ ನೀಡಿವೆ ಎಂಬುದನ್ನು ಪರಿಶೀಲಿಸಿದರೆ ಆಶ್ಚರ್ಯ ಕಾದಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎರಡು ಎಸ್.ಟಿ. ಮೀಸಲು ಮತ್ತು ಐದು ಎಸ್.ಸಿ. ಮೀಸಲು ಕ್ಷೇತ್ರಗಳಿದ್ದು, ಉಳಿದ 21 ಕ್ಷೇತ್ರಗಳ ಪೈಕಿ ಬಿಜೆಪಿ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಓಬಿಸಿ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿಲ್ಲ. ಅದೇ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ (ಕಾಂಗ್ರೆಸ್ ಮತ್ತು ಜೆಡಿಎಸ್) ಟಿಕೆಟ್ ನೀಡಿಕೆಯು ವೈವಿಧ್ಯಮಯವಾಗಿದೆ.

ಎಸ್.ಟಿ. ಎಂಬುದು ಪರಿಶಿಷ್ಟ ಪಂಗಡವಾಗಿದ್ದು, ಉಳಿದ ರಾಜ್ಯಗಳಲ್ಲಿ ಆದಿವಾಸಿ-ಗಿರಿಜನರು ಅದರ ಭಾಗವಾಗಿ ಒಂದಷ್ಟು ಪ್ರಾತಿನಿಧ್ಯ ಪಡೆದುಕೊಳ್ಳುತ್ತಾರೆ. ಆದರೆ, ಕರ್ನಾಟಕದಲ್ಲಿ ಹಿಂದೆ ರಾಜ್ಯದ ಕೆಲವು ಭಾಗಗಳನ್ನು ಆಳಿದ ಇತಿಹಾಸವಿರುವ (ಈಗಲೂ ಆ ಕುಟುಂಬಗಳ ಪ್ರತಿನಿಧಿಗಳು ವಿವಿಧ ರಾಜಕೀಯ ಪಕ್ಷಗಳಿಂದ ಟಿಕೆಟ್ ಪಡೆದುಕೊಳ್ಳುತ್ತಿದ್ದಾರೆ) ವಾಲ್ಮೀಕಿ/ನಾಯಕ ಸಮುದಾಯವು ಎಸ್.ಟಿ.ಯ ಭಾಗವಾಗಿದೆ. ಈ ಸಮುದಾಯದವರೇ ಬಳ್ಳಾರಿ ಮತ್ತು ರಾಯಚೂರು ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳಾಗಿ (ಎರಡೂ ಕಾಂಗ್ರೆಸ್) ಕಣಕ್ಕಿಳಿದಿದ್ದಾರೆ.

ಇನ್ನು ಎಸ್.ಸಿ. ಮೀಸಲು ಕ್ಷೇತ್ರಗಳಿಗೆ ಬಂದರೆ, ಐದು ಕ್ಷೇತ್ರಗಳಲ್ಲಿ ಬಿಜೆಪಿಯು ಎರಡು ಎಡಗೈ ಸಮುದಾಯಕ್ಕೆ, ಎರಡು ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿದ್ದರೆ, ಕಾಂಗ್ರೆಸ್ ಸಹ ಎರಡು ಬಲಗೈ ಮತ್ತು ಎರಡು ಎಡಗೈ ಸಮುದಾಯಕ್ಕೆ ನೀಡಿದೆ.ಮತ್ತು ಮೈತ್ರಿಯಿಂದ ವಿಜಯಪುರದಲ್ಲಿ ಲಂಬಾಣಿ ಸಮುದಾಯದ ಸುನೀತಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯು ಒಬ್ಬ ಸ್ಪೃಶ್ಯ (ಲಂಬಾಣಿ) ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

ಉಳಿದ 21 ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರದಲ್ಲಿ ಓಬಿಸಿ ಸಮುದಾಯದ ಪಿ.ಸಿ.ಮೋಹನ್‍ರಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ಬಿಟ್ಟರೆ, ರಾಜ್ಯದ ಉಳಿದೆಲ್ಲಾ ಕ್ಷೇತ್ರಗಳಲ್ಲಿ ಮೇಲ್ಜಾತಿಗಳಿಗೇ ಮಣೆ ಹಾಕಿದೆ. ಅದರಲ್ಲಿ 7 ಲಿಂಗಾಯಿತರಿಗೆ, 6 ಒಕ್ಕಲಿಗರಿಗೆ, ಮೂರು (ಶೇ.10ಕ್ಕಿಂತ ಹೆಚ್ಚು) ಬ್ರಾಹ್ಮಣರಿಗೆ ಮತ್ತು 1 ಬಂಟ ಸಮುದಾಯಕ್ಕೆ ನೀಡಿದೆ.

ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದ 5 ಒಕ್ಕಲಿಗರಿಗೆ, 5 ಲಿಂಗಾಯಿತರಿಗೆ, 1 ನಾಮಧಾರಿ ರೆಡ್ಡಿ, 1 ಬಂಟರಿಗೆ ನೀಡಿದ್ದರೆ, ಹಿಂದುಳಿದ ವರ್ಗಗಳಲ್ಲಿ 8 (3 ಕುರುಬರು, 2 ಈಡಿಗರು, 1 ಬಿಲ್ಲವ, 1 ಸವಿತಾ ಸಮಾಜ, 1 ದೇವಳಿ) ಸಮುದಾಯದವರಿಗೆ ಟಿಕೆಟ್ ನೀಡಿದೆ ಮತ್ತು ಒಬ್ಬರು ಮುಸ್ಲಿಮರಿಗೆ ಟಿಕೆಟ್ ನೀಡಿದೆ. ಬಿಜೆಪಿ ಒಬ್ಬರು ಮಹಿಳೆಗೆ ಟಿಕೆಟ್ ನೀಡಿದ್ದರೆ, ಮೈತ್ರಿ ಪಕ್ಷಗಳು ಇಬ್ಬರಿಗೆ ನೀಡಿವೆ. ಬಿಜೆಪಿ ಒಬ್ಬರೂ ಮುಸ್ಲಿಮರಿಗೆ (ಕರ್ನಾಟಕದ ಜನಸಂಖ್ಯೆಯ ಶೇ.13ರಷ್ಟಿರುವ ಸಮುದಾಯ) ಟಿಕೆಟ್ ನೀಡಿಲ್ಲ.

ಕರ್ನಾಟಕದ ಜನಸಂಖ್ಯೆಯಲ್ಲಿ ಶೇ.50ಕ್ಕಿಂತ ಹೆಚ್ಚಿರುವ ಜಾತಿ ಸಮುದಾಯಗಳಿಗೆ ಬಿಜೆಪಿ ಪಕ್ಷವು ಇಷ್ಟು ಕಡಿಮೆ ಸಂಖ್ಯೆಯಲ್ಲಿ ಪ್ರಾತಿನಿಧ್ಯ ಕೊಟ್ಟಿದೆ ಮತ್ತು ಈ ಕುರಿತು ಅವರಿಗೆ ಇದೊಂದು ಸಮಸ್ಯೆ ಎಂತಲೂ ಅನಿಸುತ್ತಿಲ್ಲ. ಚುನಾವಣಾ ರಾಜಕಾರಣದಲ್ಲಿ ಗೆಲುವು ಒಂದು ಮಾನದಂಡವಾದಾಗ ಪ್ರಾಬಲ್ಯ ಮತ್ತು ಜಾತಿ ಜನಗಳ ಸಂಖ್ಯೆಯೇ ಮುಖ್ಯವಾಗಿಬಿಡುತ್ತದೆ. ಹಾಗಾಗಿ ಸಂಖ್ಯೆಯಲ್ಲಿ ಸಣ್ಣದಾಗಿರುವ ಜಾತಿಗಳಂತೂ ಅನಾಥವಾಗಿಬಿಡುತ್ತವೆ. ಆದರೆ, ಸಂಖ್ಯೆಯಲ್ಲೂ ದೊಡ್ಡದಾಗಿರುವ ಹಿಂದುಳಿದ ಜಾತಿಗಳಿಗೆ ಬಿಜೆಪಿ ಪ್ರಾತಿನಿಧ್ಯ ಕಲ್ಪಿಸಿಲ್ಲ. ಕಾಂಗ್ರೆಸ್ ಈ ವಿಚಾರದಲ್ಲಿ ಗಣನೀಯವಾದ ಪ್ರಾತಿನಿಧ್ಯವನ್ನು ಕೊಟ್ಟಿದೆ. ಆದರೆ, ಬಹುತೇಕ ಕಾಂಗ್ರೆಸ್‍ಗೇ ಮತ ಹಾಕುವ ಮುಸ್ಲಿಮರಿಗೆ ಈ ರಾಜ್ಯದಲ್ಲಿ ಕನಿಷ್ಠ 3 ಪ್ರಾತಿನಿಧ್ಯವಾದರೂ ಇರಬೇಕಿತ್ತು. ಒಂದೇ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದೆ. ಮುಸ್ಲಿಮರು ನಿಂತರೆ ಗೆಲ್ಲುವುದಿಲ್ಲ ಎಂಬ ದುರಂತದ ಸ್ಥಿತಿ ಇರುವುದು ವಾಸ್ತವವಾದರೂ ಅದನ್ನು ಸರಿ ಮಾಡುವ ಬಗೆಯ ಕುರಿತು ಆ ಪಕ್ಷ ಯೋಚಿಸಿದಂತೆ ಕಾಣುವುದಿಲ್ಲ.
ಮಹಿಳೆಯರ ವಿಚಾರಕ್ಕೆ ಬರುವುದಾದರೆ, ಯಾವ ಪಕ್ಷಗಳೂ ಬೆನ್ನು ತಟ್ಟಿಕೊಳ್ಳುವ ಹಾಗಿಲ್ಲ. ಈ ಬಾರಿ ತೃಣಮೂಲ ಕಾಂಗ್ರೆಸ್ ಮತ್ತು ಒರಿಸ್ಸಾದ ಬಿಜೆಡಿ ಮಾತ್ರ ಧೈರ್ಯದ ನಿರ್ಧಾರಕ್ಕೆ ಮುಂದಾಗಿವೆ.

ಹಿಂದುಳಿದ ವರ್ಗಗಳ ಪ್ರಾತಿನಿಧ್ಯದ ವಿಚಾರದಲ್ಲಿ ಅಭಿಪ್ರಾಯಗಳಿಗಾಗಿ ವಿವಿಧ ಪಕ್ಷಗಳು ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಮಾತಾಡಿಸಿದೆವು.
ವಿ.ನಾಗರಾಜು, ದಸಂಸ (ಸಂಯೋಜಕ) ಮುಖಂಡರು
ಇದರಲ್ಲಿ ಸ್ಪಷ್ಟವಾಗುತ್ತದೆ ಇವರು ಎಷ್ಟು ಶೋಷಿತ ಸಮುದಾಯಗಳ ವಿರುದ್ಧವಿದ್ದಾರೆಂಬುದು. ಒಂದು ವೇಳೆ ಎಸ್‍ಸಿ ಮತ್ತು ಎಸ್‍ಟಿ ಮೀಸಲು ಇರದಿರುತ್ತಿದ್ದರೆ, ಅವರಿಗೂ ಟಿಕೆಟ್ ನೀಡುತ್ತಿರಲಿಲ್ಲ. ಮುಖ್ಯವಾಗಿ ಬಿಜೆಪಿಯು ಮನುವಾದಿ ಪಕ್ಷ. ಅವರ ಕಿಚನ್ ಒಳಗೆ ಯಾವ ಕಾರಣಕ್ಕೂ ಶೋಷಿತ ಸಮುದಾಯಗಳನ್ನು ಮತ್ತು ಮುಸ್ಲಿಮರನ್ನು ಬಿಟ್ಟುಕೊಳ್ಳುವುದಿಲ್ಲ. ಹಾಗಾಗಿಯೇ ಹಿಂದುಳಿದ ವರ್ಗದ ನಾಯಕರಿದ್ದರೂ ಅವರು ಮೇಲಕ್ಕೆ ಬಂದರೆ ತಮಗೆ ತೊಂದರೆ ಎಂದು ಭಾವಿಸುತ್ತಾರೆ.

ಬಿ.ಜೆ.ಪುಟ್ಟಸ್ವಾಮಿ, ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರು
ಪಾರ್ಲಿಮೆಂಟ್‍ನಲ್ಲಿ ಗೆಲ್ಲುವ ಅವಕಾಶ ಇರಬೇಕು. ನಮ್ಮಲ್ಲಿ ಹೆಚ್ಚು ಎಸ್ಟಾಬ್ಲಿಷ್ ಆಗಿರುವ ಬ್ಯಾಕ್‍ವರ್ಡ್ ಕ್ಲಾಸ್ ಲೀಡರ್ಸ್ ಇಲ್ಲ. ಬೇರೆ ಪಕ್ಷಗಳಲ್ಲಿ ಮೊದಲಿಂದಲೂ ಎಸ್ಟಾಬ್ಲಿಷ್ ಆಗಿದ್ದಾರೆ. ನಾಲ್ಕು ಕಡೆ ಟಿಕೆಟ್ ಕೊಡಬೇಕೆಂದು ಕೇಳಿದ್ದೆವು. ಆದರೆ, ನಮಗೆ ಸೀಟು ಕೊಡಿ ಎಂದು ಕೇಳಿದವರೇ ಇಬ್ಬರು. ಹಿಂದುಳಿದ ವರ್ಗಗಳಿಗೆ ಯಡಿಯೂರಪ್ಪನವರೇ ಆದ್ಯತೆ ಕೊಟ್ಟು ಮಠಮಾನ್ಯಗಳಿಗೆ ಹಣ ಕೊಟ್ಟರು.

ಭಗವಂತ ಖೂಬಾ ಅವರನ್ನು ಹಿಂದುಳಿದ ವರ್ಗವೆಂದ ಪುಟ್ಟಸ್ವಾಮಿ
ಪತ್ರಿಕೆಯ ವತಿಯಿಂದ ಪುಟ್ಟಸ್ವಾಮಿಯವರನ್ನು ಸಂಪರ್ಕಿಸಿದಾಗ ಭಗವಂತ ಖೂಬಾ ಅವರಿಗೂ ಕೊಟ್ಟಿದೆ, ಅವರು ಹಿಂದುಳಿದ ವರ್ಗ ಎಂದರು. ವಾಸ್ತವದಲ್ಲಿ ಭಗವಂತ ಖೂಬಾ ಅವರು ದೀಕ್ಷಾ ಲಿಂಗಾಯಿತರಾಗಿದ್ದಾರೆ. ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡರೆ ಕರ್ನಾಟಕದಲ್ಲಿ ಒಕ್ಕಲಿಗರು, ಲಿಂಗಾಯಿತರೂ ಒಬಿಸಿ ಅಡಿಯಲ್ಲಿ ಮೀಸಲಾತಿ ಪಡೆಯುತ್ತಾರೆ. ಹಾಗಾಗಿಯೇ ಮೋದಿಯವರ ಮೇಲ್ಜಾತಿಗೆ 10% ಮೀಸಲಾತಿಯು ನಿಜವಾದ ಅರ್ಥದಲ್ಲಿ ಲಭ್ಯವಾಗುವುದು ಬ್ರಾಹ್ಮಣರಿಗೆ. ಹೀಗಿದ್ದರೂ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರು ಎರಡು ಸೀಟು ಕೊಟ್ಟಿದ್ದೇವೆ ಎಂದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆಯ ಶಿವರಾಂ
ಬಿಜೆಪಿ ಪಕ್ಷವು ಸಮಾನತೆಯ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿಯಾಗಿದ್ದು, ಅವರು ಮನುಸಂಸ್ಕøತಿಯನ್ನು ಮರುಸ್ಥಾಪಿಸಲು ಯೋಚಿಸುವವರು. 3% ಇರುವ ಬ್ರಾಹ್ಮಣರಿಗೆ ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಕಲ್ಪಿಸುವ ಹೆಸರಿನಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದವರು. ಹಾಗಾಗಿ ಅವರು ಈ ರೀತಿ ಮಾಡಿದ್ದಾರೆ.

ಕೆ.ಆರ್.ಗೋಪಾಲಕೃಷ್ಣ, ಸಾಮಾಜಿಕ ಕಾರ್ಯಕರ್ತರು, ಮೈಸೂರು
ಬಿಜೆಪಿಗೂ ಸಾಮಾಜಿಕ ನ್ಯಾಯಕ್ಕೂ ಸಂಬಂಧವಿಲ್ಲ. ಏಕಮುಖಿ ಸಂಸ್ಕೃತಿಯ ಪ್ರತಿಪಾದಕರಿಗೆ ಬಹುಮುಖಿ ಸಂಸ್ಕೃತಿಯ ವೈವಿಧ್ಯದ ಮಹತ್ವದ ಅರಿವು ಅರ್ಥವಾಗುವುದು ಹೇಗೆ? ಜಾತಿ ಆಧಾರದಲ್ಲಿ ಶೋಷಣೆ, ತಾರತಮ್ಯ, ಆಸ್ತಿಯ ಮೇಲಿನ ಅಧಿಕಾರ ಇರುವ ಈ ದೇಶದಲ್ಲಿ ರಾಜಕೀಯ ಪ್ರಾತಿನಿಧ್ಯವನ್ನಾದರೂ ಕಲ್ಪಿಸುವುದಕ್ಕೆ ಪಕ್ಷಗಳು ಯೋಚಿಸಬೇಕು. ಮೀಸಲಾತಿ ಇರದಿದ್ದರೆ ಒಬ್ಬ ದಲಿತರಿಗೂ ಅವರು ಟಿಕೆಟ್ ನೀಡುತ್ತಿರಲಿಲ್ಲ ಎಂಬ ಅನಿಸಿಕೆ ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...