Homeಅಂತರಾಷ್ಟ್ರೀಯಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

- Advertisement -
- Advertisement -

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ.

ರಾಷ್ಟ್ರದ ಅತಿದೊಡ್ಡ ನಗರವಾದ ಯಾಂಗೊನ್‌ನಲ್ಲಿ ಪ್ರತಿಭಟನಾಕಾರರು ಒಟ್ಟುಗೂಡಿದ್ದು, ಅಲ್ಲಿ ವಾಹನಗಳನ್ನು ಅಡ್ಡಯಿಟ್ಟು ಸೈನ್ಯವು ಚಲಿಸದಂತೆ ತಡೆದ್ದಾರೆ. ಯಾಂಗೋನ್‌‌ನಲ್ಲಿ ಸೈನ್ಯವನ್ನು ನೇಮಿಸಲಾಗಿದ್ದು ಪರಿಸ್ಥಿತಿಯು ಹಿಂಸೆಗೆ ತಿರುಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ಯ್ರೂಸ್ ಎಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

“ಮಯನ್ಮಾರ್‌‌ನಲ್ಲಿ ಫೆಬ್ರವರಿ 1 ರಂದು ದೇಶದ ಆಡಳಿತವನ್ನು ವಶಕ್ಕೆ ಪಡೆದಾಗ ನಡೆದ ಹಿಂಸಾಚಾರಕ್ಕಿಂತ ಬುಧವಾರದಂದು ಹೆಚ್ಚಿನ ಪ್ರಮಾಣದಲ್ಲಿ ಹಿಂಸಾಚಾರದ ಸಾಧ್ಯತೆಯಿದೆ. ಈ ಹಿಂದಿನ ಸೈನ್ಯದ ಕ್ಷಿಪ್ರಕ್ರಾಂತಿಯಲ್ಲೂ ಕೊಲೆಗಳು, ನಾಪತ್ತೆ ಪ್ರಕರಣಗಳು, ಬಂಧನಗಳು ನಡೆಯುತ್ತಿದ್ದವು” ಎಂದು ಆಂಡ್ರ್ಯೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಯಾನ್ಮಾರ್‌‌‌ ಕುರಿತು ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಕಳವಳಗಳನ್ನು ವ್ಯಕ್ತಪಡಿಸಿದ್ದು, “ದೇಶದಲ್ಲಿ ಸುಮಾರು 21 ಜನಾಂಗೀಯ ಸಶಸ್ತ್ರ ಸಂಘಟನೆಗಳು ಸೈನ್ಯದ ಕ್ಷಿಪ್ರಕ್ರಾಂತಿಗೆ ವಿರುದ್ಧವಾಗಿವೆ ಎಂಬುದನ್ನು ನಾವು ಮರೆಯಬಾರದು. ಆದ್ದರಿಂದ ಹಿಂಸಾಚಾರದ ಸಾಧ್ಯತೆಗಳು ತುಂಬಾ ಹೆಚ್ಚಿವೆ… ಇದು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಕೊನೆಗೊಳ್ಳಬಹುದು” ಎಂದು ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಕ್ರಿಸ್ಟೀನ್ ಸ್ಕ್ರಾನರ್ ಬರ್ಗೆನರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪೆರೋನಿಸಂ & ಮಿಲಿಟರಿ ಸರ್ವಾಧಿಕಾರ ಆಳುವ ವರ್ಗ ಮತ್ತು ಮಿಲಿಟರಿ

ಸಾಮಾಜಿಕ ಕಾರ್ಯಕರ್ತರು ಸೇನೆಯ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿದ್ದು, ಸೇನೆಗೆ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಫ್ಯೂ ಫ್ಯೂ ಥಾ, “ನಾವು ಹಲವು ವರ್ಷಗಳಿಂದ ಮಿಲಿಟರಿ ನಿಯಂತ್ರಣದಲ್ಲಿದ್ದೆವು, ಈ ಸಮಯದಲ್ಲಿ ನಾವು ಅವುಗಳನ್ನು ಮುಗಿಸಲೇಬೇಕು. ನಮಗೆ ನಿಜವಾದ ಪ್ರಜಾಪ್ರಭುತ್ವ ಬೇಕು. ನಮ್ಮ ದೇಶವನ್ನು ಆಳಲು ಮಿಲಿಟರಿಗೆ ನಾವು ಇನ್ನು ಮುಂದೆ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಟರ್ನೆಟ್ ತಡೆ ಮುಂದುವರಿಕೆಯ ನಡುವೆಯು ಹೋರಾಟಗಾರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆಗಳಿಗೆ ಕರೆ ನೀಡಿದ್ದಾರೆ.‌ “ನಾವು ಸಾಮೂಹಿಕವಾಗಿ ರ್‍ಯಾಲಿ ನಡೆಸೋಣ, ಯುವಕರ ಮತ್ತು ನಮ್ಮ ದೇಶದ ಭವಿಷ್ಯವನ್ನು ನಾಶಪಡಿಸಿದ ಮಿಲಿಟರಿ ಸರ್ಕಾರದ ವಿರುದ್ಧ ನಮ್ಮ ಬಲವನ್ನು ತೋರಿಸೋಣ” ಎಂದು ಬಂಧಿತ ನಾಯಕಿ ಆಂಗ್ ಸಾನ್ ಸೂಕಿ ಅವರ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ವಕ್ತಾರ ಕೈ ಟೋ ಮಂಗಳವಾರ ತಡರಾತ್ರಿ ತಮ್ಮ ಫೇಸ್‌ಬುಕ್‌ ಪೇಜ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...