Homeಕರ್ನಾಟಕಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಯನ್ನು ಆರೆಸ್ಸೆಸ್‌‌ನವರು ಗುರುತು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದರು

- Advertisement -
- Advertisement -

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ನಿಧಿ ಸಂಗ್ರಹಿಸಲು ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದರೆ ಅವರ ವಿರುದ್ಧ ದೂರು ನೀಡಿ. ಸರ್ಕಾರ ಮತ್ತು ಸಂಘ ಪರಿವಾರ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಜೆಡಿಎಸ್ ನಾಯಕ ಹೆಚ್‌‌.ಡಿ. ಕುಮಾರಸ್ವಾಮಿಗೆ ಹೇಳಿದ್ದಾರೆ.

“ತಮ್ಮ ತಂದೆಯವರು ಹಿಂದೆ ಮುಖ್ಯಮಂತ್ರಿಗಳಾಗಿದ್ದವರು, ದೇಶದ ಪ್ರಧಾನ ಮಂತ್ರಿಗಳಾಗಿದ್ದವರು, ಜೊತೆಗೆ  ವಿಶೇಷವಾಗಿ ದೈವಭಕ್ತಿ ಹೊಂದಿರುವ ಕುಟುಂಬವಾಗಿದೆ. ನೀವು ಎಲ್ಲಾ ಸಂದರ್ಭದಲ್ಲಿ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗುತ್ತೀರಿ, ಮಠಮಾನ್ಯಗಳಿಗೆ ಹೋಗುತ್ತೀರಿ, ಹೋಮ ಹವನ ಮಾಡಿಸುತ್ತೀರಿ. ಇಲ್ಲಿ ಭಕ್ತಿ ಸಮರ್ಪಣೆ ಮಾಡಲು ಜಾತಿ-ಧರ್ಮವಿಲ್ಲ, ನೀವು ಯಾಕೆ ಸಂಘಪರಿವಾರದ ಕಾರ್ಯಕರ್ತರನ್ನು ಹಿಟ್ಲರ್‌ಗೆ ಹೋಲಿಕೆ ಮಾಡುತ್ತೀರಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

“ಇದುವರೆಗೂ ಎಲ್ಲಿಯೂ ಹಣವನ್ನು ಬಲವಂತವಾಗಿ ವಸೂಲಿ ಮಾಡಿರುವ ಉದಾಹರಣೆ ಇಲ್ಲ. ಯಾರು ಆ ರೀತಿ ನಕಲಿಯಾಗಿ ಮಾಡುತ್ತಾರೋ ಅವರ ಮೇಲೆ ಕೇಸು ನೀಡಿ. ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ. ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ. ಇದಕ್ಕೆ ಉದಾರವಾಗಿ ದೇಣಿಗೆಯನ್ನು ಕೊಡುತ್ತಿದ್ದಾರೆ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ದೇಣಿಗೆ ನೀಡದ ಮನೆಯನ್ನು ಗುರುತು ಹಾಕುತ್ತಿದ್ದಾರೆ ಎಂದು ನೀವು ತೋರಿಸಿ, ಯಾರು ನಿಮಗೆ ಬೆದರಿಕೆ ಹಾಕಿದ್ದಾರೆ. ಕುಮಾರಸ್ವಾಮಿಯವರು ಯಾವುದೆ ವಿಷಯ ಇಲ್ಲದ್ದಕ್ಕೆ ವಿಷಯಾಂತರ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ: ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಸೋಮವಾರದಂದು ಟ್ವೀಟರ್‌‌‌ನಲ್ಲಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಮತ್ತೇ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, “ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಇದಕ್ಕೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...