Homeಮುಖಪುಟಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಜಸ್ಥಾನದಲ್ಲಿ ಪೆಟ್ರೋಲ್ ಒಂದು ಲೀಟರ್‌ಗೆ 100 ರೂ.ಗಳು ದಾಟಿದ್ದು, ಭಾರತದಲ್ಲಿ ಸಾರ್ವಕಾಲಿಕ ಹೆಚ್ಚಳ ಕಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇಂಧನದ ಬೆಲೆ ಹೆಚ್ಚಳಕ್ಕೆ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರದತ್ತ ಕೈ ತೋರಿಸಿದ್ದಾರೆ. ಅವರು, “ಹಿಂದಿನ ಸರ್ಕಾರಗಳು ಇಂಧನ ಆಮದು ಪ್ರಮಾಣ ತಗ್ಗಿಸುವತ್ತ ಗಮನ ನೀಡಿದ್ದರೆ ಮಧ್ಯಮ ವರ್ಗಕ್ಕೆ ಹೊರೆ ಆಗುತ್ತಿರಲಿಲ್ಲ’’ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆಗಳನ್ನು ಉದ್ಘಾಟಿಸುವ ಆನ್‌ಲೈನ್ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಮೋದಿ, “2019–20 ರಲ್ಲಿ ಭಾರತಕ್ಕೆ ಅಗತ್ಯವಿದ್ದ 85% ಕ್ಕಿಂತ ಹೆಚ್ಚಿನ ಪ್ರಮಾಣದ ತೈಲವನ್ನು ಆಮದು ಮಾಡಿಕೊಳ್ಳಲಾಯಿತು, ನೈಸರ್ಗಿಕ ಅನಿಲದ ಅಗತ್ಯತೆಯ ಶೇ 53ರಷ್ಟನ್ನು ಆಮದು ಮಾಡಿಕೊಳ್ಳಲಾಯಿತು” ಎಂದು ಹೇಳಿದ್ದಾರೆ.

ಆದರೆ ಅವರು ತಮ್ಮ ಮಾತಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳ ಆಗುತ್ತಿರುವುದರ ಬಗ್ಗೆ ಮಾತನಾಡಲಿಲ್ಲ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

‘‘ನಮ್ಮಷ್ಟು ವೈವಿಧ್ಯತೆ ಹೊಂದಿರುವ, ಇಷ್ಟೊಂದು ಪ್ರತಿಭೆ ಹೊಂದಿರುವ ದೇಶವು ಇಂಧನದ ಅಗತ್ಯಗಳಿಗೆ ಈ ರೀತಿಯಲ್ಲಿ ಆಮದನ್ನು ಅವಲಂಬಿಸಿರಬೇಕೆ?. ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಆದರೆ, ಈ ವಿಚಾರ ಇಂಧನ ಬೆಲೆ ಹೆಚ್ಚಳದ ಹೊಣೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರಿಸಿದ್ದಾರೆ.

“ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಸಾಮೂಹಿಕ ಪ್ರಯತ್ನದ ಅಗತ್ಯವಿದೆ. ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ. ಹಾಗಾಗಿ ದೇಶವು ಇಂದು ಎಥೆನಾಲ್ ಬಳಕೆಗೆ ಆದ್ಯತೆ ನೀಡುತ್ತಿದೆ. ಇದು ಗ್ರಾಹಕರಿಗೂ ರೈತರಿಗೂ ಸಹಾಯ ಮಾಡುತ್ತದೆ. ಇಂಧನ ಆಮದನ್ನು ತಗ್ಗಿಸಲು ದೇಶ ಯತ್ನಿಸುತ್ತಿದೆ’’ ಎಂದು ಪ್ರಧಾನಿ ಹೇಳಿದ್ದಾರೆ.

“2014 ರಿಂದ, ನಾವು ತೈಲ ಮತ್ತು ಅನಿಲ ವಲಯದಾದ್ಯಂತ ವಿವಿಧ ಸುಧಾರಣೆಗಳನ್ನು ತಂದಿದ್ದೇವೆ. ಪರಿಶೋಧನೆ ಮತ್ತು ಉತ್ಪಾದನೆ, ನೈಸರ್ಗಿಕ ಅನಿಲ ಮಾರುಕಟ್ಟೆ ಮತ್ತು ವಿತರಣೆಯನ್ನು ಒಳಗೊಂಡಿದೆ. ಹೂಡಿಕೆದಾರ ಸ್ನೇಹಿ ಕ್ರಮಗಳ ಮೂಲಕ ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸುವ ಕೆಲಸ ಮಾಡುತ್ತಿದ್ದೇವೆ. ಭಾರತದ ಶಕ್ತಿಯ ಮೇಲೆ ಹೂಡಿಕೆ ಮಾಡಬೇಕೆಂದು ಜಗತ್ತಿಗೆ ಹೇಳಲು ನಾನು ಬಯಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಪೆಟ್ರೋಲ್ ಬೆಲೆಯಲ್ಲಿ 60% ದಷ್ಟು ಹಾಗೂ ಡೀಸೆಲ್ ಬೆಲೆಯಲ್ಲಿ 54% ದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ವಿವಿಧ ಸುಂಕ, ತೆರಿಗೆಗಳಿಗೆ ಪಾವತಿಯಾಗುತ್ತವೆ.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...