Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...