Homeಮುಖಪುಟತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಮೂಲದ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪತ್ರಕರ್ತೆ ಪ್ರಿಯಾ ರಮಣಿ, “ತಮ್ಮದಲ್ಲದ ತಪ್ಪಿಗೆ ಜೈಲಿನಲ್ಲಿರುವ ದಿಶಾ ರವಿ ಮತ್ತು ಇತರ ಮಹಿಳೆಯರ ಪರವಾಗಿ ನಮ್ಮ ಚಿಂತನೆಗಳಿರುತ್ತವೆ” ಎಂದು ಹೇಳಿದ್ದಾರೆ.

ಈ ಕುರಿತು ಪ್ರಿಯಾ ರಮಣಿಯವರ ಹೇಳಿಕೆಯನ್ನು ಎನ್‌ಡಿಟಿವಿ ವರದಿ ಮಾಡಿದೆ. ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ದಿಶಾ ರವಿಯನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ಪ್ರಿಯಾ ರಮಣಿ ಯಾರು?

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಪ್ರಿಯಾ ರಮಣಿ ಮೇಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿರುವ ಕೋರ್ಟ್ “ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿತ್ತು.

2018 ರಲ್ಲಿ ಭಾರಿ ಸದ್ದು ಮಾಡಿದ್ದ #MeToo ವಿವಾದದ ಸಮಯದಲ್ಲಿ, ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ವಿರುದ್ದ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದರೆ ಪತ್ರಕರ್ತೆಯ ವಿರುದ್ಧ ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ಕುರಿತು ದೆಹಲಿ ಕೋರ್ಟ್ ವಿಚಾರಣೆ ನಡೆಸಿ ನಿನ್ನೆ ತೀರ್ಪು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಅಕ್ಬರ್ ಅವರು ರಮಣಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದಾದ ಎರಡು ದಿನಗಳ ನಂತರ, ಅಕ್ಟೋಬರ್ 17, 2018 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

“ಭಾರತೀಯ ಸಂವಿಧಾನವು ಮಹಿಳೆಯರಿಗೆ ತನ್ನ ಕುಂದುಕೊರತೆಗಳನ್ನು ಯಾವುದೇ ವೇದಿಕೆಯ ಮುಂದೆ ಮತ್ತು ಯಾವುದೇ ಸಮಯದಲ್ಲಿ ಮಂಡಿಸಲು ಅನುವು ಮಾಡಿಕೊಡುತ್ತದೆ “ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ತಿಳಿಸಿದ್ದಾರೆ.

ಪತ್ರಕರ್ತೆ ಪ್ರಿಯಾ ರಮಣಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು 2018 ರ ಅಕ್ಟೋಬರ್‌ 15 ರಂದು ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. 2021 ರ ಫೆಬ್ರವರಿ 1 ರಂದು ಎರಡು ಕಡೆಯ ವಾದಗಳನ್ನು ಆಲಿಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಮುಚ್ಚಿದ ಬಾಗಿಲುಗಳ ಹಿಂದೆ ಹೆಚ್ಚಿನ ಬಾರಿ ಲೈಂಗಿಕ ಕಿರುಕುಳ ನಡೆಯುತ್ತಿರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ … ದುರುಪಯೋಗಕ್ಕೆ ಒಳಗಾಗುವ ಹೆಚ್ಚಿನ ಮಹಿಳೆಯರು ತಮ್ಮ ಮೇಲಿನ ಕಳಂಕ ಮತ್ತು ದಾಳಿಯಿಂದಾಗಿ ಹೆಚ್ಚಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಹೇಳಿದ್ದಾರೆ.

ಲೈಂಗಿಕ ದಾಳಿ ಮತ್ತು ಕಿರುಕುಳಕ್ಕೆ ಒಳಗಾದ ಸಂತ್ರಸ್ಥೆಯ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಇದು 20 ವರ್ಷದ ಹಿಂದಿನ ಪ್ರಕರಣವಾಗಿರಬಹುದು. ಮಹಿಳೆಯು ತನಗಾದ ಅನ್ಯಾಯದ ವಿರುದ್ಧ ದಶಕಗಳ ನಂತರವೂ ದನಿಯೆತ್ತುವ ಹಕ್ಕು ಹೊಂದಿದ್ದಾಳೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಎಂ.ಜೆ. ಅಕ್ಬರ್ ಏಷ್ಯನ್ ಏಜ್ ಮುಖ್ಯಸ್ಥರಾಗಿದ್ದಾಗ, ಸುಮಾರು 20 ವರ್ಷಗಳ ಹಿಂದೆ ಈ ಲೈಂಗಿಕ ದುಷ್ಕೃತ್ಯ ನಡೆದಿದೆ ಎಂದು ಪತ್ರಿಕೆಯ ಲೇಖನವೊಂದರಲ್ಲಿ ಪ್ರಿಯಾ ರಮಣಿ ಬರೆದಿದ್ದರು. ಉದ್ಯೋಗ ಸಂದರ್ಶನಕ್ಕಾಗಿ ನನ್ನನ್ನು ತಮ್ಮ ಹೋಟೆಲ್ ಮಲಗುವ ಕೋಣೆಗೆ ಕರೆದು ಅಕ್ಬರ್ ಅನುಚಿತವಾಗಿ ವರ್ತಿಸಿದ್ದರು ಎಂದು ರಮಣಿ ಆರೋಪಿಸಿದ್ದರು. ಅವರ ಲೇಖನದ ಪರಿಣಾಮವಾಗಿ, ಸುಮಾರು ಒಂದು ಡಜನ್ ಮಹಿಳೆಯರು ಮಾಜಿ ಸಂಪಾದಕ ಅಕ್ಬರ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಹೊರಿಸಿದ್ದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....