HomeಮುಖಪುಟAIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಜೈಲಿನಲ್ಲಿದ್ದ ದಿ. ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಈಗ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (AIDMK) ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.) ಪಕ್ಷದಲ್ಲಿ ತನಗೆ ಉನ್ನತ ಹುದ್ದೆ ನೀಡಬೇಕು ಎಂದು ಶಶಿಕಲಾ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ಅವರನ್ನು ವಜಾಗೊಳಿಸಲಾಗಿತ್ತು. ಇದಕ್ಕಾಗಿ ಇ ಪಳನಿಸಾಮಿ ಮತ್ತು ಒ ಪನ್ನೀರ್‌ಸೆಲ್ವಂ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆದಿದ್ದರು. ಇದರ ವಿರುದ್ಧ 2017 ರಲ್ಲಿ ಚೆನ್ನೈ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ ಇದರ ತುರ್ತು ವಿಚಾರಣೆ ಮಾಡುವಂತೆ ಕೋರಿ ಮತ್ತೊಂದು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರ್ಚ್ 15 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕರಾದ 66 ವರ್ಷದ ಶಶಿಕಲಾ, ಜಯಲಲಿತಾ ಅವರ ಮರಣದ ನಂತರ ಪಕ್ಷದ ಮುಖ್ಯಸ್ಥರಾದರು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಒಳಗಾದರು, ಇದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿ ಹೋಗಿತ್ತು.

ಇದನ್ನೂ ಓದಿ: ಪೆರಿಯಾರ್ ನೆಲದಲ್ಲಿ ನಡೆಯದ ಬಿಜೆಪಿ ಪ್ರಯೋಗ; ಮಾಜಿ ಐಎಎಸ್ ಸಸಿಕಾಂತ್ ಸೆಂಥಿಲ್ ಸಂದರ್ಶನ

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.

ಈಗ ಶಶಿಕಲಾ ಜೈಲಿನಿಂದ ಮರಳಿ ಬಂದಿದ್ದು, ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇನ್ನೇನು ತಮಿಳುನಾಡಿನ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದ್ದು, ಕೆಲವೆ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಹಾಗಾಗಿ ತಮಿಳುನಾಡಿನಲ್ಲಿ ರಾಜಕೀಯ ಮಹತ್ವವುಳ್ಳ ಹಲವು ಘಟನೆಗಳು ಸಂಭವಿಸುತ್ತಿವೆ.

ವರ್ಚಸ್ವಿ ಮತ್ತು ಶಕ್ತಿಯುತ ಜಯಲಲಿತಾ ಅವರ ಮರಣದ ನಂತರ ತನ್ನ ನಾಯಕತ್ವದ ನಿರ್ವಾತದಿಂದ ಎಂದೂ ಚೇತರಿಸಿಕೊಳ್ಳದ ಪಕ್ಷದಲ್ಲಿ ಈಗ ಶಶಿಕಲಾ ಕುತೂಹಲ, ಪ್ರಕ್ಷುಬ್ಧತೆ, ಗೊಂದಲಗಳ ಹೆಚ್ಚಳಕ್ಕೆ ಕಾರಣರಾಗಿದ್ದಾರೆ.

ಮುಖ್ಯಮಂತ್ರಿ ಜನವರಿಯಲ್ಲಿ ಬಿಜೆಪಿ ನಾಯಕತ್ವದ ಸಭೆಯ ನಂತರ, ಶಶಿಕಲಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಶಶಿಕಲಾ ಹಿಂದಿರುಗಿದಾಗಿನಿಂದ, ತನ್ನ ಮಾಜಿ ಮಾರ್ಗದರ್ಶಕಿ ಶಶಿಕಲಾ ಕುರಿತು ಯಾವ ಟೀಕೆ ಮಾಡದೇ ಮೌನವಾಗಿದ್ದಾರೆ. ಆದರೆ ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಅವರನ್ನು ಮಾತ್ರ ಗುರಿಯಾಗಿಸಿ ಸಿಎಂ ಇಪಿಎಸ್ ಟೀಕೆ ಮಾಡುತ್ತಿದ್ದಾರೆ. ಜಯಲಲಿತಾ ಅವರನ್ನು “ಅಮ್ಮ” ಎಂದು ಕರೆಯುತ್ತಿದ್ದ ಎಐಎಡಿಎಂಕೆ ಕಾರ್ಯಕರ್ತರು ಶಶಿಕಲಾರನ್ನು “ಚಿನ್ನಮ್ಮ (ಚಿಕ್ಕಮ್ಮ)” ಎಂದು ಕರೆಯುತ್ತಾರೆ. ಈ ಚಿನ್ನಮ್ಮನೊಂದಿಗೆ ಸಿಎಂ ಪಳಿನಿಸ್ವಾಮಿ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪಕ್ಷದ ವಿರೋಧವಿದ್ದರೂ ಕೂಡ, ತಾನು ಹೋದಲ್ಲೆಲ್ಲಾ ಎಐಎಡಿಎಂಕೆ ಧ್ವಜವನ್ನು ತಮ್ಮ ಕಾರಿನ ಮೇಲೆ ಹಾರಿಸುವ ಮೂಲಕ ಶಶಿಕಲಾ ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದಾರೆ.
2017 ರಲ್ಲಿ ಚುನಾವಣಾ ಆಯೋಗವು ಇಪಿಎಸ್-ಒಪಿಎಸ್ ಬಣಕ್ಕೆ ನೀಡಿದ್ದ ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆ ಮತ್ತು ಹೆಸರನ್ನು ಪಡೆಯಲು ಶಶಿಕಲಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಶಿಕಲಾ ಮೇಲೆ ಈ ಹಿಂದೆ ಇಡಿ ದಾಳಿ ಮಾಡಿಸಿದ್ದ ಬಿಜೆಪಿ ಶಶಿಕಲಾ ಎಐಎಡಿಎಂಕೆಗೆ ಸೇರುವುದನ್ನು ಸದ್ಯ ವಿರೋಧಿಸುತ್ತಿದೆ.


ಇದನ್ನೂ ಓದಿ: ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...