HomeಮುಖಪುಟAIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಜೈಲಿನಲ್ಲಿದ್ದ ದಿ. ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಈಗ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (AIDMK) ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.) ಪಕ್ಷದಲ್ಲಿ ತನಗೆ ಉನ್ನತ ಹುದ್ದೆ ನೀಡಬೇಕು ಎಂದು ಶಶಿಕಲಾ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ಅವರನ್ನು ವಜಾಗೊಳಿಸಲಾಗಿತ್ತು. ಇದಕ್ಕಾಗಿ ಇ ಪಳನಿಸಾಮಿ ಮತ್ತು ಒ ಪನ್ನೀರ್‌ಸೆಲ್ವಂ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆದಿದ್ದರು. ಇದರ ವಿರುದ್ಧ 2017 ರಲ್ಲಿ ಚೆನ್ನೈ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ ಇದರ ತುರ್ತು ವಿಚಾರಣೆ ಮಾಡುವಂತೆ ಕೋರಿ ಮತ್ತೊಂದು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರ್ಚ್ 15 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕರಾದ 66 ವರ್ಷದ ಶಶಿಕಲಾ, ಜಯಲಲಿತಾ ಅವರ ಮರಣದ ನಂತರ ಪಕ್ಷದ ಮುಖ್ಯಸ್ಥರಾದರು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಒಳಗಾದರು, ಇದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿ ಹೋಗಿತ್ತು.

ಇದನ್ನೂ ಓದಿ: ಪೆರಿಯಾರ್ ನೆಲದಲ್ಲಿ ನಡೆಯದ ಬಿಜೆಪಿ ಪ್ರಯೋಗ; ಮಾಜಿ ಐಎಎಸ್ ಸಸಿಕಾಂತ್ ಸೆಂಥಿಲ್ ಸಂದರ್ಶನ

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.

ಈಗ ಶಶಿಕಲಾ ಜೈಲಿನಿಂದ ಮರಳಿ ಬಂದಿದ್ದು, ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇನ್ನೇನು ತಮಿಳುನಾಡಿನ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದ್ದು, ಕೆಲವೆ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಹಾಗಾಗಿ ತಮಿಳುನಾಡಿನಲ್ಲಿ ರಾಜಕೀಯ ಮಹತ್ವವುಳ್ಳ ಹಲವು ಘಟನೆಗಳು ಸಂಭವಿಸುತ್ತಿವೆ.

ವರ್ಚಸ್ವಿ ಮತ್ತು ಶಕ್ತಿಯುತ ಜಯಲಲಿತಾ ಅವರ ಮರಣದ ನಂತರ ತನ್ನ ನಾಯಕತ್ವದ ನಿರ್ವಾತದಿಂದ ಎಂದೂ ಚೇತರಿಸಿಕೊಳ್ಳದ ಪಕ್ಷದಲ್ಲಿ ಈಗ ಶಶಿಕಲಾ ಕುತೂಹಲ, ಪ್ರಕ್ಷುಬ್ಧತೆ, ಗೊಂದಲಗಳ ಹೆಚ್ಚಳಕ್ಕೆ ಕಾರಣರಾಗಿದ್ದಾರೆ.

ಮುಖ್ಯಮಂತ್ರಿ ಜನವರಿಯಲ್ಲಿ ಬಿಜೆಪಿ ನಾಯಕತ್ವದ ಸಭೆಯ ನಂತರ, ಶಶಿಕಲಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಶಶಿಕಲಾ ಹಿಂದಿರುಗಿದಾಗಿನಿಂದ, ತನ್ನ ಮಾಜಿ ಮಾರ್ಗದರ್ಶಕಿ ಶಶಿಕಲಾ ಕುರಿತು ಯಾವ ಟೀಕೆ ಮಾಡದೇ ಮೌನವಾಗಿದ್ದಾರೆ. ಆದರೆ ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಅವರನ್ನು ಮಾತ್ರ ಗುರಿಯಾಗಿಸಿ ಸಿಎಂ ಇಪಿಎಸ್ ಟೀಕೆ ಮಾಡುತ್ತಿದ್ದಾರೆ. ಜಯಲಲಿತಾ ಅವರನ್ನು “ಅಮ್ಮ” ಎಂದು ಕರೆಯುತ್ತಿದ್ದ ಎಐಎಡಿಎಂಕೆ ಕಾರ್ಯಕರ್ತರು ಶಶಿಕಲಾರನ್ನು “ಚಿನ್ನಮ್ಮ (ಚಿಕ್ಕಮ್ಮ)” ಎಂದು ಕರೆಯುತ್ತಾರೆ. ಈ ಚಿನ್ನಮ್ಮನೊಂದಿಗೆ ಸಿಎಂ ಪಳಿನಿಸ್ವಾಮಿ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪಕ್ಷದ ವಿರೋಧವಿದ್ದರೂ ಕೂಡ, ತಾನು ಹೋದಲ್ಲೆಲ್ಲಾ ಎಐಎಡಿಎಂಕೆ ಧ್ವಜವನ್ನು ತಮ್ಮ ಕಾರಿನ ಮೇಲೆ ಹಾರಿಸುವ ಮೂಲಕ ಶಶಿಕಲಾ ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದಾರೆ.
2017 ರಲ್ಲಿ ಚುನಾವಣಾ ಆಯೋಗವು ಇಪಿಎಸ್-ಒಪಿಎಸ್ ಬಣಕ್ಕೆ ನೀಡಿದ್ದ ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆ ಮತ್ತು ಹೆಸರನ್ನು ಪಡೆಯಲು ಶಶಿಕಲಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಶಿಕಲಾ ಮೇಲೆ ಈ ಹಿಂದೆ ಇಡಿ ದಾಳಿ ಮಾಡಿಸಿದ್ದ ಬಿಜೆಪಿ ಶಶಿಕಲಾ ಎಐಎಡಿಎಂಕೆಗೆ ಸೇರುವುದನ್ನು ಸದ್ಯ ವಿರೋಧಿಸುತ್ತಿದೆ.


ಇದನ್ನೂ ಓದಿ: ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...