HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...