HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...