Homeಮುಖಪುಟಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

- Advertisement -
- Advertisement -

13 ಮತ್ತು 16 ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರ ಶವಗಳು ಬುಧವಾರ ಸಂಜೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮದ ಕುಟುಂಬವೊಂದರ ಜಮೀನಿನಲ್ಲಿ ಪತ್ತೆಯಾಗಿವೆ. ಮತ್ತೊಬ್ಬ 17 ವರ್ಷದ ಬಾಲಕಿಯ ಸ್ಥಿತಿ ಗಂಭೀರ ವಾಗಿದೆ. ಹಿರಿಯ ಹುಡುಗಿಯರು ಸಹೋದರಿಯರಾಗಿದ್ದರು, 13 ವರ್ಷದ ಹುಡುಗಿ ಅವರ ಸೋದರಸಂಬಂಧಿ ಎಂದು ಇಂಡಿಯನ್‌ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಪೊಲೀಸರು ಇದು ವಿಷಪ್ರಾಶನದ ಪ್ರಕರಣ ಎಂದು ಶಂಕಿಸಿದ್ದಾರೆ, ಸ್ಥಳದಲ್ಲಿ ಯಾವುದೇ ಹೋರಾಟದ ಲಕ್ಷಣಗಳಿಲ್ಲ ಮತ್ತು ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬಾಲಕಿಯರ ಸಹೋದರ, ತನ್ನ ಸಹೋದರಿಯರ ಕೈ-ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ಆರೋಪಿಸಿದ್ದಾರೆ.. ಆಸ್ಪತ್ರೆಗೆ ಬಂದಾಗ ಕಿರಿಯ ಬಾಲಕಿಯರನ್ನು ಮೃತರೆಂದು ಘೋಷಿಸಲಾಗಿದ್ದರೆ, 17 ವರ್ಷದ ಯುವತಿಯು ಸ್ಥಿತಿ ಗಂಭೀರವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹೋದರ, “ಅವರು ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದರು. ಇಂದು, ಅವರು ತಡವಾದರೂ ಹಿಂತಿರುಗದೇ ಇದ್ದಾಗ, ನಾವು ಅವರನ್ನು ಹುಡುಕಲು ಹೋದೆವು. ಅವರ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ ಹಾಕಿದ್ದನ್ನು ಕಂಡೆವು’ ಎಂದಿದ್ದಾರೆ.

ಲಕ್ನೋ ವಲಯದ ಐಜಿ ಲಕ್ಷ್ಮಿ ಸಿಂಗ್, ಹುಡುಗಿಯರನ್ನು ಕಟ್ಟಿಹಾಕಲಾಗಿತ್ತೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಮೃತರ ಸಹೋದರ ಈ ಹೇಳಿಕೆಯನ್ನು ನೀಡಿದ್ದಾನೆ, ಆದರೆ ಪೊಲೀಸರು ಸ್ಥಳ ತಲುಪುವ ಮೊದಲು ಶವಗಳನ್ನು ಆ ಜಾಗದಿಂದ ತೆಗೆದಿದ್ದರಿಂದ ನಾವು ಈಗ ಏನನ್ನೂ ಹೇಳಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಯುಪಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಬಾಲಕಿಯರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಿಂದ ಹೊರಟು ಹೋಗಿದ್ದು, ಸಂಜೆ ಕುಟುಂಬ ಸದಸ್ಯರು ಇದನ್ನು ಪತ್ತೆ ಮಾಡಿದ್ದಾರೆ.

ಉನ್ನಾವೊ ಎಸ್ಪಿ ಸುರೇಶರಾವ್ ಎ ಕುಲಕರ್ಣಿ, “ಅಶೋಹಾ ಪೊಲೀಸ್ ಠಾಣೆ ಮಿತಿಯಲ್ಲಿ, ಮೂವರು ಬಾಲಕಿಯರು ತಮ್ಮ ಜಮೀನಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರು ಮೇವು/ಹುಲ್ಲು ತರಲು ಹೋಗಿದ್ದರು ಮತ್ತು ಕುಟುಂಬ ಸದಸ್ಯರು ಅವರನ್ನು ಹುಡುಕಲು ಹೋದಾಗ, ಅವರು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಕೊಂಡರು. ಅವರ ಬಾಯಿಯಿಂದ ಬಿಳಿ ಪದಾರ್ಥ ಹೊರಬರುತ್ತಿತ್ತು, ಇದು ವಿಷಪ್ರಾಶನದ ಲಕ್ಷಣ ಎಂದು ವೈದ್ಯರು ತಕ್ಷಣಕ್ಕೆ ಅನುಮಾನಿಸಿದ್ದಾರೆ. ನಾವು ಸಂಬಂಧಪಟ್ಟ ಎಲ್ಲ ಜನರ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ ಮತ್ತು ಆಳವಾದ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

ಎಡಿಜಿ (ಲಕ್ನೋ ವಲಯ) ಎಸ್ ಎನ್ ಸಬತ್, ಅಪರಾಧದ ಸ್ಥಳದಲ್ಲಿ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳಿಲ್ಲ ಎಂದು ಹೇಳಿದರು. “ನಮ್ಮ ತನಿಖೆ ನಡೆಯುತ್ತಿದೆ. ನಾವು ಸಾಧ್ಯವಿರುವ ಎಲ್ಲ ಕೋನಗಳಲ್ಲಿ ತನಿಖೆ ಮಾಡುತ್ತಿದ್ದೇವೆ” ಎಂದು ಎಡಿಜಿ ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಉನ್ನಾವ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....