Homeಮುಖಪುಟಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

- Advertisement -
- Advertisement -

13 ಮತ್ತು 16 ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರ ಶವಗಳು ಬುಧವಾರ ಸಂಜೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮದ ಕುಟುಂಬವೊಂದರ ಜಮೀನಿನಲ್ಲಿ ಪತ್ತೆಯಾಗಿವೆ. ಮತ್ತೊಬ್ಬ 17 ವರ್ಷದ ಬಾಲಕಿಯ ಸ್ಥಿತಿ ಗಂಭೀರ ವಾಗಿದೆ. ಹಿರಿಯ ಹುಡುಗಿಯರು ಸಹೋದರಿಯರಾಗಿದ್ದರು, 13 ವರ್ಷದ ಹುಡುಗಿ ಅವರ ಸೋದರಸಂಬಂಧಿ ಎಂದು ಇಂಡಿಯನ್‌ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಪೊಲೀಸರು ಇದು ವಿಷಪ್ರಾಶನದ ಪ್ರಕರಣ ಎಂದು ಶಂಕಿಸಿದ್ದಾರೆ, ಸ್ಥಳದಲ್ಲಿ ಯಾವುದೇ ಹೋರಾಟದ ಲಕ್ಷಣಗಳಿಲ್ಲ ಮತ್ತು ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬಾಲಕಿಯರ ಸಹೋದರ, ತನ್ನ ಸಹೋದರಿಯರ ಕೈ-ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ಆರೋಪಿಸಿದ್ದಾರೆ.. ಆಸ್ಪತ್ರೆಗೆ ಬಂದಾಗ ಕಿರಿಯ ಬಾಲಕಿಯರನ್ನು ಮೃತರೆಂದು ಘೋಷಿಸಲಾಗಿದ್ದರೆ, 17 ವರ್ಷದ ಯುವತಿಯು ಸ್ಥಿತಿ ಗಂಭೀರವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹೋದರ, “ಅವರು ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದರು. ಇಂದು, ಅವರು ತಡವಾದರೂ ಹಿಂತಿರುಗದೇ ಇದ್ದಾಗ, ನಾವು ಅವರನ್ನು ಹುಡುಕಲು ಹೋದೆವು. ಅವರ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ ಹಾಕಿದ್ದನ್ನು ಕಂಡೆವು’ ಎಂದಿದ್ದಾರೆ.

ಲಕ್ನೋ ವಲಯದ ಐಜಿ ಲಕ್ಷ್ಮಿ ಸಿಂಗ್, ಹುಡುಗಿಯರನ್ನು ಕಟ್ಟಿಹಾಕಲಾಗಿತ್ತೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಮೃತರ ಸಹೋದರ ಈ ಹೇಳಿಕೆಯನ್ನು ನೀಡಿದ್ದಾನೆ, ಆದರೆ ಪೊಲೀಸರು ಸ್ಥಳ ತಲುಪುವ ಮೊದಲು ಶವಗಳನ್ನು ಆ ಜಾಗದಿಂದ ತೆಗೆದಿದ್ದರಿಂದ ನಾವು ಈಗ ಏನನ್ನೂ ಹೇಳಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಯುಪಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಬಾಲಕಿಯರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಿಂದ ಹೊರಟು ಹೋಗಿದ್ದು, ಸಂಜೆ ಕುಟುಂಬ ಸದಸ್ಯರು ಇದನ್ನು ಪತ್ತೆ ಮಾಡಿದ್ದಾರೆ.

ಉನ್ನಾವೊ ಎಸ್ಪಿ ಸುರೇಶರಾವ್ ಎ ಕುಲಕರ್ಣಿ, “ಅಶೋಹಾ ಪೊಲೀಸ್ ಠಾಣೆ ಮಿತಿಯಲ್ಲಿ, ಮೂವರು ಬಾಲಕಿಯರು ತಮ್ಮ ಜಮೀನಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರು ಮೇವು/ಹುಲ್ಲು ತರಲು ಹೋಗಿದ್ದರು ಮತ್ತು ಕುಟುಂಬ ಸದಸ್ಯರು ಅವರನ್ನು ಹುಡುಕಲು ಹೋದಾಗ, ಅವರು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಕೊಂಡರು. ಅವರ ಬಾಯಿಯಿಂದ ಬಿಳಿ ಪದಾರ್ಥ ಹೊರಬರುತ್ತಿತ್ತು, ಇದು ವಿಷಪ್ರಾಶನದ ಲಕ್ಷಣ ಎಂದು ವೈದ್ಯರು ತಕ್ಷಣಕ್ಕೆ ಅನುಮಾನಿಸಿದ್ದಾರೆ. ನಾವು ಸಂಬಂಧಪಟ್ಟ ಎಲ್ಲ ಜನರ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ ಮತ್ತು ಆಳವಾದ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

ಎಡಿಜಿ (ಲಕ್ನೋ ವಲಯ) ಎಸ್ ಎನ್ ಸಬತ್, ಅಪರಾಧದ ಸ್ಥಳದಲ್ಲಿ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳಿಲ್ಲ ಎಂದು ಹೇಳಿದರು. “ನಮ್ಮ ತನಿಖೆ ನಡೆಯುತ್ತಿದೆ. ನಾವು ಸಾಧ್ಯವಿರುವ ಎಲ್ಲ ಕೋನಗಳಲ್ಲಿ ತನಿಖೆ ಮಾಡುತ್ತಿದ್ದೇವೆ” ಎಂದು ಎಡಿಜಿ ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಉನ್ನಾವ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...