Homeಮುಖಪುಟ'ಫಾಸ್ಟ್ಯಾಗ್' ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

'ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ’

- Advertisement -
- Advertisement -

“ನಮ್ಮ ರೈತರ ಭೂಮಿ ಕಸಿದುಕೊಂಡು, ನಮ್ಮ ತೆರಿಗೆಯಿಂದ ನಿರ್ಮಾಣ ಮಾಡಿದ ರಸ್ತೆಗಳಿಗೆ ಈಗಾಗಲೇ ರಸ್ತೆ ತೆರಿಗೆ ಎಂದು ಕಟ್ಟುತ್ತಿದ್ದೇವೆ. ಆದರೂ ಟೋಲ್ ಫೀ ಏಕೆ ಕಟ್ಟಬೇಕು. ಹಗಲು ದರೋಡೆಯನ್ನು ಸರ್ಕಾರ ಡಿಜಿಟಲೀಕರಣ ಮಾಡಿದ್ದು, ಫಾಸ್ಟ್ಯಾಗ್ ಮೂಲಕ ಯೋಜಿತ ದರೋಡೆಗೆ ಇಳಿದಿದೆ” ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್ ಆರೋಪಿಸಿದ್ದಾರೆ.

ಗುರುವಾರ (ಫೆ.18) ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ರಾಥೋಡ್, ಸಾರಿಗೆ ಇಲಾಖೆ ರಸ್ತೆ ಶುಲ್ಕ ವಸೂಲಿ ಮಾಡುತ್ತಿದೆ. ಆದರೂ‌ ಟೋಲ್ ಶುಲ್ಕವನ್ನು ಯಾಕೆ ಕಟ್ಟಬೇಕು ಎಂದು ಪ್ರಶ್ನಿಸಿದ್ದಾರೆ. ರಸ್ತೆ ನಿರ್ಮಾಣ ಕಂಪೆನಿಗಳ ಅಡಿಯಾಳಾಗಿರುವ ಕೇಂದ್ರ ಸರ್ಕಾರ 18 ವರ್ಷ ಇದ್ದ ಟೋಲ್ ಸಂಗ್ರಹ ಗುರಿಯನ್ನು 30 ವರ್ಷಕ್ಕೆ ಏರಿಸಿದೆ. ಇದೊಂದು ಉದಾಹರಣೆ ಸಾಕು ಸರ್ಕಾರದ ಹಗಲು ದರೋಡೆಗೆ ಎಂದರು.

“ದೇಶದಲ್ಲಿ ದಿನವೊಂದಕ್ಕೆ 105 ಕೋಟಿ‌ಯಷ್ಟು ಟೋಲ್ ವಸೂಲಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ವಸೂಲಿ ಮಾಡಿದ ಹಣ ಎಲ್ಲಿ ಹೋಯಿತು. ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನೆಲಮಂಗಲ-ತುಮಕೂರು ಹೆದ್ದಾರಿ ಅತ್ಯಂತ ಕಳಪೆಯಿಂದ ಗುಣಮಟ್ಟದಿಂದ ಕೂಡಿದ್ದು, ಹೆದ್ದಾರಿ ಎನ್ನುವ ಪದಕ್ಕೆ ಅವಮಾನ ಮಾಡಿದಂತಿದೆ. ಆದರೂ ಟೋಲ್ ಶುಲ್ಕವನ್ನು ಅಮಾನುಷವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬೆರಳೆಣಿಕೆಯಷ್ಟು ರಸ್ತೆಗಳು ಮಾತ್ರ ಟೋಲ್ ಮುಕ್ತವಾಗಿದ್ದು, ಎಲ್ಲಾ ಕಡೆಯೂ ಜನಸಾಮಾನ್ಯರ ಹಣ ದೋಚಲಾಗುತ್ತಿದೆ. ಅಲ್ಲದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಸಂಗ್ರಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಬಾರಿ ಅಧಿಕಾರ ಹಿಡಿದಾಗ ಮುನ್ನುಡಿ ಬರೆದಿದ್ದರು. ಎಲ್ಲಾ ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸಲು ಜನ ಹಣ ಕಟ್ಟಬೇಕಾದ ದಿನ ದೂರವಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Image result for bengalore navayug toll gate fastag
PC: Deccan Herald

ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್‌.ವಿ ಮಾತನಾಡಿ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಎಲ್ಲಾ ಟೋಲ್ ಪ್ಲಾಜಾಗಳ ಬಂದ್‌ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಈಗಾಗಲೇ ಪಂಜಾಬ್ ರಾಜ್ಯದಲ್ಲಿ ಅಕ್ಟೋಬರ್‌ 1 ರಿಂದ ಟೋಲ್‌ಪ್ಲಾಜಾಗಳನ್ನು ವಶಕ್ಕೆ ಪಡೆಯಲಾಗಿದೆ. ಫೆಬ್ರವರಿ 12ರಿಂದ ರಾಜಸ್ಥಾನದ ಟೋಲ್ ಪ್ಲಾಜಾಗಳನ್ನು ಜನರಿಗಾಗಿ ಫ್ರೀ ಮಾಡಲಾಗಿದೆ.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...