Homeಅಂತರಾಷ್ಟ್ರೀಯಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು. ಇದು ಪಾಕಿಸ್ತಾನ, ಭಾರತವಲ್ಲ” ಹೀಗೆಂದು ಹೇಳಿದವರು ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಆಥರ್ ಮಿನಲ್ಲಾ!..

ದೇಶದ್ರೋಹ ಮತ್ತು ಭಯೋತ್ಪಾದನೆಯನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸೋಮವಾರ ವಿಚಾರಣೆ ನಡೆಸುತ್ತಿದ್ದ ಅವರು, ಎಲ್ಲದ್ದಕ್ಕೂ ದೇಶದ್ರೋಹ ಪ್ರಕರಣ ದಾಖಲಿಸಲು ಇದು ಭಾರತವಲ್ಲ ಎಂಬರ್ಥದ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಪ್ರತಿಭಟನಾಕಾರರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ ಮುಖಂಡ ಮತ್ತು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಮಂಜೂರ್ ಪಶ್ತೀನ್ ಅವರನ್ನು ಜನವರಿ 27 ರಂದು ಪೇಶಾವರದಲ್ಲಿ ಬಂಧಿಸಲಾಗಿತ್ತು. ಅವರ ಬಂಧನ ವಿರೋಧಿಸಿ ಜನವರಿ 28 ರಂದು ಪ್ರತಿಭಟಿಸಿದ ಅವಾಮಿ ವರ್ಕರ್ಸ್ ಪಾರ್ಟಿ ಮತ್ತು ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ 23 ಕಾರ್ಯಕರ್ತರನ್ನು ಇಸ್ಲಾಮಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 28 ರಂದು ಇಸ್ಲಾಮಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಗುಂಪಿನಲ್ಲಿದ್ದ ಇಬ್ಬರು ಪ್ರಮುಖ ವ್ಯಕ್ತಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.  ಫೆಬ್ರವರಿ 2 ರಂದು ಅವರ ವಿರುದ್ಧದ ದೇಶದ್ರೋಹ ಆರೋಪವನ್ನು ಕೈಬಿಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ್ದರೂ, ಭಯೋತ್ಪಾದನಾ ವಿರೋಧಿ ಕಾಯ್ದೆ (ಎಟಿಎ), 1997 ರ ಸೆಕ್ಷನ್ 7 ಅನ್ನು ಎಫ್‌ಐಆರ್‌ಗೆ ಸೇರಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಈ ಆರೋಪಗಳನ್ನು ಯಾವ ಆಧಾರದ ಮೇಲೆ ಸೇರಿಸಲಾಯಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ವಿವರಣೆ ನೀಡುವಂತೆ ನ್ಯಾಯಾಧೀಶ ಮಿನಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಅಲ್ಲದೆ ಬಂಧಿತರಿಗೆ ಜಾಮೀನು ನೀಡುತ್ತಾ “ಚುನಾಯಿತ ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಭಯಪಡಬಾರದು. ನ್ಯಾಯಾಲಯಗಳು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ. ಇದು ಪಾಕಿಸ್ತಾನ, ಭಾರತವಲ್ಲ” ಎಂದು ಮಿನಲ್ಲಾ ಹೇಳಿದ್ದಾರೆ.

ನ್ಯಾಯಾಧೀಶರು ಈ ಹೇಳಿಕೆಯ ಮೂಲಕ ಅವರು ಏನು ಹೇಳುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಸದಿದ್ದರೂ, “ಸರ್ಕಾರವನ್ನು ಪ್ರಶ್ನಿಸುತ್ತಿರುವ ಭಾರತದ ಯುವಜನರ ವಿರುದ್ಧ ಹೆಚ್ಚುತ್ತಿರುವ ದೇಶದ್ರೋಹ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ” ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರಲ್ಲಿ ಒಬ್ಬರಾದ ಅಮ್ಮರ್ ರಶೀದ್ “ನಮ್ಮ ದೇಶದಲ್ಲಿ (ಪಾಕಿಸ್ತಾನ) ಭಿನ್ನಾಭಿಪ್ರಾಯ, ಶಾಂತಿಯುತ ಪ್ರತಿಭಟನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಪರಾಧೀಕರಣದ ವಿರುದ್ಧ ಈ ತೀರ್ಪು ಶಾಶ್ವತವಾದ ಉತ್ತಮ ನಿದರ್ಶನವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು! ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...