Homeಅಂತರಾಷ್ಟ್ರೀಯಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು. ಇದು ಪಾಕಿಸ್ತಾನ, ಭಾರತವಲ್ಲ” ಹೀಗೆಂದು ಹೇಳಿದವರು ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಆಥರ್ ಮಿನಲ್ಲಾ!..

ದೇಶದ್ರೋಹ ಮತ್ತು ಭಯೋತ್ಪಾದನೆಯನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸೋಮವಾರ ವಿಚಾರಣೆ ನಡೆಸುತ್ತಿದ್ದ ಅವರು, ಎಲ್ಲದ್ದಕ್ಕೂ ದೇಶದ್ರೋಹ ಪ್ರಕರಣ ದಾಖಲಿಸಲು ಇದು ಭಾರತವಲ್ಲ ಎಂಬರ್ಥದ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಪ್ರತಿಭಟನಾಕಾರರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ ಮುಖಂಡ ಮತ್ತು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಮಂಜೂರ್ ಪಶ್ತೀನ್ ಅವರನ್ನು ಜನವರಿ 27 ರಂದು ಪೇಶಾವರದಲ್ಲಿ ಬಂಧಿಸಲಾಗಿತ್ತು. ಅವರ ಬಂಧನ ವಿರೋಧಿಸಿ ಜನವರಿ 28 ರಂದು ಪ್ರತಿಭಟಿಸಿದ ಅವಾಮಿ ವರ್ಕರ್ಸ್ ಪಾರ್ಟಿ ಮತ್ತು ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ 23 ಕಾರ್ಯಕರ್ತರನ್ನು ಇಸ್ಲಾಮಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 28 ರಂದು ಇಸ್ಲಾಮಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಗುಂಪಿನಲ್ಲಿದ್ದ ಇಬ್ಬರು ಪ್ರಮುಖ ವ್ಯಕ್ತಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.  ಫೆಬ್ರವರಿ 2 ರಂದು ಅವರ ವಿರುದ್ಧದ ದೇಶದ್ರೋಹ ಆರೋಪವನ್ನು ಕೈಬಿಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ್ದರೂ, ಭಯೋತ್ಪಾದನಾ ವಿರೋಧಿ ಕಾಯ್ದೆ (ಎಟಿಎ), 1997 ರ ಸೆಕ್ಷನ್ 7 ಅನ್ನು ಎಫ್‌ಐಆರ್‌ಗೆ ಸೇರಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಈ ಆರೋಪಗಳನ್ನು ಯಾವ ಆಧಾರದ ಮೇಲೆ ಸೇರಿಸಲಾಯಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ವಿವರಣೆ ನೀಡುವಂತೆ ನ್ಯಾಯಾಧೀಶ ಮಿನಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಅಲ್ಲದೆ ಬಂಧಿತರಿಗೆ ಜಾಮೀನು ನೀಡುತ್ತಾ “ಚುನಾಯಿತ ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಭಯಪಡಬಾರದು. ನ್ಯಾಯಾಲಯಗಳು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ. ಇದು ಪಾಕಿಸ್ತಾನ, ಭಾರತವಲ್ಲ” ಎಂದು ಮಿನಲ್ಲಾ ಹೇಳಿದ್ದಾರೆ.

ನ್ಯಾಯಾಧೀಶರು ಈ ಹೇಳಿಕೆಯ ಮೂಲಕ ಅವರು ಏನು ಹೇಳುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಸದಿದ್ದರೂ, “ಸರ್ಕಾರವನ್ನು ಪ್ರಶ್ನಿಸುತ್ತಿರುವ ಭಾರತದ ಯುವಜನರ ವಿರುದ್ಧ ಹೆಚ್ಚುತ್ತಿರುವ ದೇಶದ್ರೋಹ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ” ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರಲ್ಲಿ ಒಬ್ಬರಾದ ಅಮ್ಮರ್ ರಶೀದ್ “ನಮ್ಮ ದೇಶದಲ್ಲಿ (ಪಾಕಿಸ್ತಾನ) ಭಿನ್ನಾಭಿಪ್ರಾಯ, ಶಾಂತಿಯುತ ಪ್ರತಿಭಟನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಪರಾಧೀಕರಣದ ವಿರುದ್ಧ ಈ ತೀರ್ಪು ಶಾಶ್ವತವಾದ ಉತ್ತಮ ನಿದರ್ಶನವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು! ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...