Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....