Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...