Homeಮುಖಪುಟಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತ ಅವರ ಅಭಿಪ್ರಾಯಗಳು ಮತ್ತು ಸುಪ್ರೀಂ ಕೋರ್ಟ್ ನೋಂದಾವಣೆಯನ್ನು ಸುವ್ಯವಸ್ಥಿತಗೊಳಿಸುವ ಅವರ ಪ್ರಯತ್ನಗಳು ಸೇರಿದಂತೆ ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ವಕೀಲ ಉತ್ಸವ್ ಬೈನ್ಸ್ ಅವರು 2019 ರಲ್ಲಿ ಹೊರಬಂದ ಲೈಂಗಿಕ ಕಿರುಕುಳ ಆರೋಪದ ಹಿಂದೆ ಪಿತೂರಿಯ ಸಾಧ್ಯತೆಯನ್ನು ಎತ್ತಿದ ನಂತರ ಮಾಜಿ ನ್ಯಾಯಮೂರ್ತಿ ಪಟ್ನಾಯಕ್ ಅವರಿಗೆ ಈ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

“ಅಸಮಾಧಾನಗೊಂಡ ನ್ಯಾಯಾಲಯದ ಅಧಿಕಾರಿಗಳೊಂದಿಗೆ ಕೆಲಸ ಮಾಡುವ ಮಧ್ಯವರ್ತಿಗಳು ಮತ್ತು ಫಿಕ್ಸರ್‌ಗಳು ಗೊಗೊಯ್ ವಿರುದ್ಧ ಪಿತೂರಿ ಮಾಡಿದ್ದರೆ’ ಎಂಬುದರ ಕುರಿತು ಪಟ್ನಾಯಕ್ ತನಿಖೆ ಮಾಡಿ ಸಲ್ಲಿಸಿದ ವರದಿಯ ಆಧಾರದಲ್ಲಿ ಸುಪ್ರೀಂಕೋರ್ಟ್ ಇಂದಿನ ತೀರ್ಪು ನೀಡಿದೆ.

“ನ್ಯಾಯಮೂರ್ತಿ ಪಟ್ನಾಯಕ್ ವರದಿಯು ಮಾಜಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಪಿತೂರಿ ಅಸ್ತಿತ್ವದಲ್ಲಿತ್ತು ಎಂದು ಒಪ್ಪಿಕೊಂಡಿದೆ ಮತ್ತು ಅದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ಸಮಿತಿಯು ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಹೇಳಿದೆ.

“ನೋಂದಾವಣೆ (ರಿಜಿಸ್ಟ್ರಿ)ಯಲ್ಲಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೆಲವು ಕಠಿಣ ಆಡಳಿತಾತ್ಮಕ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು’ ಎಂದು ಸುಪ್ರೀಂ ಹೇಳಿದೆ.
ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಗೊಗೊಯ್ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದ್ದಾರೆ ಮತ್ತು “ಕೆಲವರು ಈ ನಿರ್ಧಾರದಿಂದ ಅಸಮಾಧಾನ ಹೊಂದಿದ್ದಾರೆಂದು ನಂಬಲು ಬಲವಾದ ಕಾರಣಗಳಿವೆ” ಎಂದು ಗುಪ್ತಚರ ಬ್ಯೂರೋ ನಿರ್ದೇಶಕರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವನ್ನು ಮುಕ್ತಾಯಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ: “ಇದರಿಂದ ಯಾವುದೇ ನಿಜವಾದ ಉದ್ದೇಶವನ್ನು ಪೂರೈಸಲಾಗುವುದಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ವಾದಗಳನ್ನು ಇಲ್ಲಿಗೆ ನಿಲ್ಲಿಸಲಾಗಿದೆ ಮತ್ತು ಸು-ಮೊಟೊ ಅನ್ನು ವಿಲೇವಾರಿ ಮಾಡಲಾಗಿದೆ. ವರದಿಯನ್ನು ಮೊಹರು ಮಾಡಿ ಕವರ್‌ನಲ್ಲಿ ಇಡಲಾಗಿದೆ.”

ಮುಖ್ಯ ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ವಿಚಾರಿಸಲು ಸಮಿತಿಯನ್ನು ರಚಿಸಲಾಗಿರಲಿಲ್ಲ. ಆದರೆ ನ್ಯಾಯಾಧೀಶರನ್ನು ಸಿಕ್ಕಿಸುವ ದೊಡ್ಡ ಪಿತೂರಿಯ ಬಗ್ಗೆ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿತ್ತು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ದಾಖಲೆಗಳಿಗೆ ಸೀಮಿತ ಲಭ್ಯತೆ ಮತ್ತು ಸಾಕ್ಷ್ಯಗಳು ಮತ್ತು ವಸ್ತುಗಳ ಆಧಾರದ ಮೇಲೆ, ಆರೋಪಗಳಿಗೆ ದೃಢೀಕರಣ ಕಂಡುಹಿಡಿಯಲು ಸಹ ಸಾಧ್ಯವಾಗಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಆದಾಗ್ಯೂ, ಸುಪ್ರೀಂ ಕೋರ್ಟಿನ 2019 ರ ಆದೇಶವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗದ ಕುರಿತ ಮುಖ್ಯ ನ್ಯಾಯಾಧೀಶರ ತೀರ್ಪುಗಳು ಅವರ ವಿರುದ್ಧದ ಪಿತೂರಿಯನ್ನು ನಿಜವಾಗಿಯೂ ಪ್ರಚೋದಿಸಿದೆಯೇ ಎಂದು ನಿರೂಪಿಸಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಏಪ್ರಿಲ್ 19, 2019 ರಂದು ಕಿರಿಯ ನ್ಯಾಯಾಲಯದ ಮಾಜಿ ಅಧಿಕಾರಿಣಿಯೊಬ್ಬರು ಭಾರತದ (ಅಂದಿನ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಅಪಾದನೆಗಳನ್ನು ದೃಢಿಕರಿಸುವ ದಾಖಲೆಗಳನ್ನು ಸಲ್ಲಿಸಿ, ಏ. 22 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ; ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...